ಟ್ರಯಾಜ್ ಕೇಂದ್ರಗಳಿಗೆ ಹೊಂದಿಕೊಂಡಂತೆ ಆಂಬುಲೆನ್ಸ್ ಇರಿಸಲಾಗುವುದು. ಅಲ್ಲಿಗೆ ಬರುವ ರೋಗಿಗಳನ್ನು ಪರೀಕ್ಷಿಸುವ ವೈದ್ಯರು, ಆಸ್ಪತ್ರೆಗೆ ದಾಖಲಿಸುವುದು, ಕೋವಿಡ್ ಆರೈಕೆ ಕೇಂದ್ರಕ್ಕೆ ಕಳಿಸುವುದು ಅಥವಾ ಮನೆಯಲ್ಲೇ ಪ್ರತ್ಯೇಕವಾಸದಲ್ಲಿ ಇರಿಸುವ ಕುರಿತು ತೀರ್ಮಾನಿಸುತ್ತಾರೆ. ಬಳಿಕ ಅಲ್ಲಿಂದಲೇ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾಗುವುದು. ಮನೆಯಲ್ಲೇ ಪ್ರತ್ಯೇಕವಾಸದಲ್ಲಿ ಇರುವವರಿಗೆ ಟ್ರಯಾಜ್ ಕೇಂದ್ರಗಳ ಮೂಲಕವೇ ಔಷಧಿ ತಲುಪಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.