ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ವಿಡಿಯೊ ಸಂದೇಶ ನೀಡಿರುವ ಸುರೇಶ್, ‘ಆಕ್ಸಿಜನ್ ಸಿಗದೇ 200 ಜನರು ಸಾವು–ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿಯು ಜಿಲ್ಲಾಧಿಕಾರಿಗಳಿಗೂ ಈ ವಿಷಯ ತಿಳಿಸಿದೆ. ನಾನು ಸಹ ಜಿಲ್ಲಾಧಿಕಾರಿ, ಆರೋಗ್ಯ ಕಾರ್ಯದರ್ಶಿಯೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ತಕ್ಷಣ ಕ್ರಮ ಕೈಗೊಂಡು ಚಾಮರಾಜನಗರದ ರೀತಿ ಮತ್ತೊಂದು ಘಟನೆ ಮರುಕಳಿಸದಂತೆ ನೋಡಿಕೊಳ್ಳಿ’ ಎಂದು ಅವರು ಎಚ್ಚರಿಸಿದ್ದಾರೆ.