‘ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಮಂದಿ ಮೃತಪಟ್ಟಿದ್ದಾರೆ. ಕಲಬುರ್ಗಿಯಲ್ಲೂ ಆಮ್ಲಜನಕದ ಕೊರತೆಯಿಂದ ಸಾವುಗಳು ಸಂಭವಿಸಿವೆ. ಬೆಂಗಳೂರಿನ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದ ಬಿಕ್ಕಟ್ಟಿನ ಸನ್ನಿವೇಶ ಸೃಷ್ಟಿಯಾಗಿದೆ. ತುಮಕೂರು, ಬೆಳಗಾವಿ, ಧಾರವಾಡ, ಹಾಸನ ಜಿಲ್ಲೆಗಳಲ್ಲೂ ಬಿಕ್ಕಟ್ಟು ಸೃಷ್ಟಿಯಾಗುವ ಲಕ್ಷಣಗಳಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.