ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿ 580 ಮೆಟ್ರಿಕ್ ಟನ್ ಆಮ್ಲಜನಕಕ್ಕೆ ಬೇಡಿಕೆ ಇತ್ತು. ಬೇಡಿಕೆ ಕಡಿಮೆ ಆಗಿದೆ ಎಂದು ಕಡೆಗಣಿಸಬಾರದು. ಮೂರನೇ ಅಲೆ ಬಂದಲ್ಲಿ ಅದನ್ನು ಎದುರಿಸಲು ಅಗತ್ಯ ತಯಾರಿ ನಡೆಸಿಕೊಳ್ಳಬೇಕು. ಎಲ್ಲ ಜಿಲ್ಲಾ ಆಸ್ಪತ್ರೆಗಳೂ ಆಮ್ಲಜನಕ ತಯಾರಿಸುವಲ್ಲಿ ಸ್ವಾವಲಂಬಿಯಾಗಿಸಬೇಕು. ಅಲ್ಲದೆ, ಜಿಲ್ಲೆಗಳಲ್ಲಿ ಬಫರ್ ಸ್ಟಾಕ್ ಸಂಗ್ರಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದೂ ಸಲಹೆ ನೀಡಿದರು.