‘ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಕುರಿತು ಮಾಧ್ಯಮಗಳ ವರದಿಯಿಂದ ತಿಳಿದು ವಿಚಲಿತನಾಗಿದ್ದೇನೆ ಮತ್ತು ಮನಸ್ಸಿಗೆ ನೋವಾಯಿತು. ಪೋಕ್ಸೊ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯದ ಅಡಿಯಲ್ಲಿ ಶರಣರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ಕೃತ್ಯವನ್ನು ಖಂಡಿಸಲು ಶಬ್ದಗಳು ಸಾಕಾಗುವುದಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.