ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಶರಣರ ವಿರುದ್ಧದ ಪ್ರಕರಣ: ಪಿ. ಸಾಯಿನಾಥ್‌ರಿಂದ ‘ಬಸವ ಶ್ರೀ’ ವಾಪಸ್‌

Last Updated 2 ಸೆಪ್ಟೆಂಬರ್ 2022, 14:29 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗದ ಮುರುಘಾಮಠವು ನೀಡಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್‌ ನೀಡುವುದಾಗಿ ಪತ್ರಕರ್ತ ಪಿ. ಸಾಯಿನಾಥ್‌ ತಿಳಿಸಿದ್ದಾರೆ.

‘ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪಗಳ ಕುರಿತು ಮಾಧ್ಯಮಗಳ ವರದಿಯಿಂದ ತಿಳಿದು ವಿಚಲಿತನಾಗಿದ್ದೇನೆ ಮತ್ತು ಮನಸ್ಸಿಗೆ ನೋವಾಯಿತು. ಪೋಕ್ಸೊ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯದ ಅಡಿಯಲ್ಲಿ ಶರಣರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ಕೃತ್ಯವನ್ನು ಖಂಡಿಸಲು ಶಬ್ದಗಳು ಸಾಕಾಗುವುದಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಈ ಪ್ರಕರಣದ ಸಂತ್ರಸ್ತ ಬಾಲಕಿಯರ ಜತೆ ನಾವಿದ್ದೇವೆ. ಇವರಿಗೆ ನ್ಯಾಯ ದೊರೆಯಬೇಕು ಎನ್ನುವ ಆಶಯದಿಂದ ಬಸವಶ್ರೀ ಪ್ರಶಸ್ತಿ ಮತ್ತು ಚೆಕ್‌ ಮೂಲಕ ನೀಡಲಾದ ₹5 ಲಕ್ಷ ಬಹುಮಾನವನ್ನು ಹಿಂತಿರುಗಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

‘ಈ ಪ್ರಕರಣವನ್ನು ಬಹಿರಂಗಪಡಿಸಲು ಶ್ರಮಿಸಿದ ಮೈಸೂರಿನ ಸರ್ಕಾರೇತರ ಸಂಸ್ಥೆಯಾದ ಒಡನಾಡಿ ಕಾರ್ಯ ಶ್ಲಾಘನೀಯ. ಕರ್ನಾಟಕ ಸರ್ಕಾರ ಈ ಪ್ರಕರಣದಲ್ಲಿ ಯಾವುದೇ ಹಂತದಲ್ಲೂ ರಾಜಿಯಾಗದೆಯೇ ಸಮಗ್ರ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.

2017ರಲ್ಲಿ ಸಾಯಿನಾಥ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT