ಶುಕ್ರವಾರ ಬೆಳಿಗ್ಗೆ ಸದನದ ಕಲಾಪ ಆರಂಭವಾದಾಗ ಬಹುತೇಕ ಸಚಿವರು ಸದನಕ್ಕೆ ಬಂದಿರಲಿಲ್ಲ. ಅಧಿಕಾರಿಗಳ ಗ್ಯಾಲರಿಯೂ ಖಾಲಿ ಇತ್ತು. ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ‘ಸಚಿವರೂ ಇಲ್ಲ, ಅಧಿಕಾರಿಗಳೂ ಇಲ್ಲ. ಯಾರಿಗಾಗಿ ಸದನ ನಡೆಸಬೇಕು? ಸರ್ಕಾರ ಕಲಾಪವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ’ ಎಂದು ಆಕ್ಷೇಪಿಸಿದರು.