ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ಯೋಧರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಸೈಯದ್ ಪರ್ವೇಜ್ ಪಾಷ, ಚಿಂತಾಮಣಿಯಲ್ಲಿ ಮಂಗಳವಾರ ಸಿಕ್ಕಿಬಿದ್ದಿದ್ದಾನೆ.
ಕೊರೊನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ವೈದ್ಯರು ಹಾಗೂ ಪೊಲೀಸರು ಪಾದರಾಯನಪುರಕ್ಕೆ ಹೋದಾಗ ಗಲಾಟೆ ಆಗಿತ್ತು. ಆ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿತ್ತು.
‘ಆರೋಪಿ ಪರ್ವೇಜ್ ಪಾಷ, ಕೃತ್ಯದ ಬಳಿಕ ತಲೆಮರೆಸಿಕೊಂಡು ಚಿಂತಾಮಣಿಗೆ ಹೋಗಿ ಅಡಗಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಜೆ.ಜೆ.ನಗರ ಠಾಣೆ ಪೊಲೀಸರು, ಚಿಂತಾಮಣಿಗೆ ಹೋಗಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ತಿಳಿಸಿದರು.