ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಮನೆ, ಚಾಮುಂಡಿಬೆಟ್ಟ ಪ್ರವೇಶ ನಿರ್ಬಂಧ

Last Updated 15 ಅಕ್ಟೋಬರ್ 2020, 6:26 IST
ಅಕ್ಷರ ಗಾತ್ರ

ಮೈಸೂರು: ದಸರಾ ಮಹೋತ್ಸವ ಹಾಗೂ ಕೋವಿಡ್‌–19 ಮುಂಜಾಗ್ರತಾ ಕ್ರಮವಾಗಿ ಬುಧವಾರ ಮಧ್ಯರಾತ್ರಿ 12 ಗಂಟೆಯಿಂದ ಅ.18ರ ಮಧ್ಯರಾತ್ರಿವರೆಗೆ ನಾಲ್ಕು ದಿನ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಅಲ್ಲದೇ, ಅ.23ರ ಬೆಳಿಗ್ಗೆ 5 ಗಂಟೆಯಿಂದ ನ.1ರ ಮಧ್ಯರಾತ್ರಿಯವರೆಗೆ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಅ.17ರಿಂದ ನ.1ರವರೆಗೆ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌.ಸುಬ್ರಮಣ್ಯ ತಿಳಿಸಿದ್ದಾರೆ.

ಮಹಿಷ ದಸರೆಗೆ ಅನುಮತಿ ಇಲ್ಲ: ‘ಅ.15ರಂದು ಚಾಮುಂಡಿಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆಗೆ ಅವಕಾಶ ನೀಡಲು ಜಿಲ್ಲಾಡಳಿತ ನಿರಾಕರಿಸಿರುವುದರಿಂದ ಅಶೋಕಪುರಂನಲ್ಲಿರುವ ಅಂಬೇಡ್ಕರ್‌ ಉದ್ಯಾನದಲ್ಲಿ ಆಚರಣೆ ಮಾಡಲಾಗುವುದು’ ಎಂದು ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT