‘ಆ.15ರೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ದಾವಣಗೆರೆ, ಹುಬ್ಬಳ್ಳಿ– ಧಾರವಾಡ, ಕಲಬುರಗಿ, ಮಂಗಳೂರು, ಬೆಳಗಾವಿ, ಮೈಸೂರು, ಬಳ್ಳಾರಿ, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆ ಸಿಬ್ಬಂದಿ ಕರಾಳ ದಿನ ಆಚರಿಸಲಿದ್ದಾರೆ. ನಂತರದ ದಿನಗಳಲ್ಲಿ ಮುಷ್ಕರ ನಡೆಸುತ್ತೇವೆ’ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎ. ಅಮೃತರಾಜ್ ತಿಳಿಸಿದ್ದಾರೆ. ‘ಪಾಲಿಕೆಗಳಲ್ಲಿ ನೌಕರರಿಗೆ ಆರೋಗ್ಯ ಸೌಲಭ್ಯದ ಜ್ಯೋತಿ ಸಂಜೀವಿನಿ, ಕೆ.ಜಿ.ಐ.ಡಿ, ಜಿ.ಪಿ.ಎಫ್ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಲಾಗಿದೆ. ಕ್ರಮ ಕೈಗೊಂಡಿಲ್ಲ. ಹೀಗಾಗಿ ಕರಾಳ ದಿನಾಚರಣೆ, ಮುಷ್ಕರ ನಡೆಸುವ ಬಗ್ಗೆ
ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಸಚಿವರು, ಪೌರಾಡಳಿತ ಇಲಾಖೆ ನಿರ್ದೇಶಕರಿಗೂ ಪತ್ರ ಬರೆದು ತಿಳಿಸಲಾಗಿದೆ’ ಎಂದರು.