ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಕೆ, ಬಾಬು ಕೃಷ್ಣಮೂರ್ತಿ, ಎಸ್.ಆರ್.ರಾಮಸ್ವಾಮಿಗೆ ಪಂಪ ಪ್ರಶಸ್ತಿ

Last Updated 28 ಫೆಬ್ರುವರಿ 2023, 5:47 IST
ಅಕ್ಷರ ಗಾತ್ರ

ಬೆಂಗಳೂರು: ಸಾಹಿತಿಗಳಾದ ಸಿ.ಪಿ. ಕೃಷ್ಣಕುಮಾರ್, ಡಾ.ಬಾಬು ಕೃಷ್ಣಮೂರ್ತಿ ಮತ್ತು ಡಾ.ಎಸ್.ಆರ್.ರಾಮಸ್ವಾಮಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ 'ಪಂಪ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

2020-21, 2021-22 ಮತ್ತು 2022-23ನೇ ಸಾಲಿನ 'ಪಂಪ' ಪ್ರಶಸ್ತಿ ಪುರಸ್ಕೃತರ ಆಯ್ಕೆಗಾಗಿ ಡಾ.ಜಿ.ಬಿ. ಹರೀಶ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು.

ಸಮಿತಿಯ ಶಿಫಾರಸಿನಂತೆ 2020-21ನೇ ಸಾಲಿಗೆ ಸಿ.ಪಿ.‌ಕೃಷ್ಣಕುಮಾರ್, 2021-22ನೇ ಸಾಲಿಗೆ ಬಾಬು ಕೃಷ್ಣಮೂರ್ತಿ ಮತ್ತು 2022-23ನೇ ಸಾಲಿನ ಪ್ರಶಸ್ತಿಗೆ ಎಸ್.ಆರ್.‌ರಾಮಸ್ವಾಮಿ ಅವರನ್ನು ಆಯ್ಕೆಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಪ್ರಶಸ್ತಿಯು ₹ 5 ಲಕ್ಷ ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT