ಬೆಂಗಳೂರು: ಚಾಮರಾಜಪೇಟೆಯಲ್ಲಿನ ಪಂಪ ಮಹಾಕವಿ ರಸ್ತೆಯ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಸ್ತೆ ಎಂದು ಹೆಸರು ಬದಲಾಯಿಸುವ ಪ್ರಸ್ತಾವವನ್ನು ಕೈಬಿಡಲಾಗಿದೆ.
ಹೆಸರು ಬದಲಾಯಿಸುವ ಸಾಹಿತ್ಯ ಪರಿಷತ್ ಪ್ರಸ್ತಾವಕ್ಕೆ ಸಾಹಿತ್ಯ ವಲಯದ ಪ್ರಮುಖರು ಮತ್ತು ಕನ್ನಡ ಸಂಘಟನೆಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಒತ್ತಡಕ್ಕೆ ಮಣಿದಿರುವ, ಸಾಹಿತ್ಯ ಪರಿಷತ್ ಕೊನೆಗೂ ತನ್ನ ನಿಲುವು ಬದಲಾಯಿಸಿದೆ.
‘ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಿಸಬೇಕೆಂಬ ಪ್ರಸ್ತಾವವನ್ನು ಬಿಬಿಎಂಪಿಗೆ ಸಲ್ಲಿಸುವುದಿಲ್ಲ’ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸ್ಪಷ್ಟಪಡಿಸಿದ್ದಾರೆ.