‘ಬಿಜೆಪಿ ನೇತೃತ್ವದ ಸರ್ಕಾರ ಪಂಚಮಸಾಲಿ ಸಮುದಾಯವನ್ನು ಮತಕ್ಕಾಗಿ ಮಾತ್ರ ಬಳಸಿಕೊಳ್ಳುತ್ತಿದೆ. ಸಮುದಾಯದ ಪರವಾಗಿ ಕೆಲಸ ಮಾಡುತ್ತಿಲ್ಲ. ಸಮುದಾಯದ ಜನರು ಅಧಿಕಾರ, ಹಣ ಕೇಳುತ್ತಿಲ್ಲ. ಮೀಸಲಾತಿ ಮಾತ್ರ ಕೇಳುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ 2ಎ ಮೀಸಲಾತಿ ಕಲ್ಪಿಸುತ್ತೇವೆಂದು ಈ ಸರ್ಕಾರವೇ ಸಮುದಾಯಕ್ಕೆ ಭರವಸೆ ನೀಡಿತ್ತು. ಅದರಂತೆ ನಡೆದುಕೊಳ್ಳಬೇಕು. ಕೊಟ್ಟ ಮಾತು ತಪ್ಪುವುದು ಬೇಡ’ ಎಂದು ಸ್ವಾಮೀಜಿ ಆಗ್ರಹಿಸಿದರು.