‘ವಚನಾನಂದ ಶ್ರೀಗಳು ಸುಳ್ಳು ಹೇಳಿ ಸಮಾಜಕ್ಕೆ ದ್ರೋಹ ಮಾಡುತ್ತಿದ್ದಾರೆ. ಮೀಸಲಾತಿ ಅವರಿಗೆ ಬೇಡವಾಗಿದ್ದರೆ ಮೌನವಹಿಸಲಿ. ಆದರೆ, ಹೋರಾಟ ಹತ್ತಿಕ್ಕುವ ಹೇಳಿಕೆಗಳನ್ನು ನೀಡಬಾರದು. ಸಮುದಾಯ ಸಹ ಮೀಸಲಾತಿ ಹೋರಾಟದ ದಾರಿ ತಪ್ಪಿಸುವ ಹೇಳಿಕೆಗಳಿಗೆ ಕಿವಿಗೊಡಬಾರದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಾದರೂ ಮೀಸಲಾತಿ ದೊರೆಯಲಿದೆ ಎನ್ನುವ ಆಶಾಭಾವ ಹೊಂದಿದ್ದೇವೆ. ಸರ್ಕಾರದ ಮೇಲೆ ವಿಶ್ವಾಸ ಇರಿಸಬೇಕು. ಕೊಟ್ಟ ಮಾತಿನಂತೆ ಸರ್ಕಾರ ಕ್ರಮಕೈಗೊಳ್ಳದಿದ್ದರೆ ಮತ್ತೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ವಿವರಿಸಿದರು.