ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ‘ಕನ್ನಡಿಗರು ಸಂಭ್ರಮಿಸುವ ಕರ್ನಾಟಕ ರಾಜ್ಯೋತ್ಸವದ ದಿನವೇ ಯಾತ್ರೆಗೆ ಚಾಲನೆ ನೀಡಲಾಗುವುದು. ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎನ್ನುವುದನ್ನು ಯಾತ್ರೆ ಮೂಲಕ ಜನರಿಗೆ ಮನವರಿಕೆ ಮಾಡಲು ಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳಂತೆ ಅಬ್ಬರವಿಲ್ಲದೆ ಯಾತ್ರೆಯ ರೂಪುರೇಷೆಗಳನ್ನು ಶೀಘ್ರ ಬಿಡುಗಡೆ ಮಡಲಾಗುವುದು’ ಎಂದರು.