ಧಾರವಾಡ: ಗ್ವಾಲಿಯರ್ ಮತ್ತು ಕಿರಾಣಾ ಘರಾಣೆಯ ಹಿಂದೂಸ್ತಾನಿ ಗಾಯಕ ಪಂ.ವಿನಾಯಕ ತೊರವಿ ಅವರು 2023ನೇ ಸಾಲಿನ ಪುಟ್ಟರಾಜ ಸಮ್ಮಾನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಡಾ. ಪುಟ್ಟರಾಜ ಗವಾಯಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿರುವ ಈ ಪ್ರಶಸ್ತಿಯು ₹1ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ಮಾರ್ಚ್ 3ರಂದು ಸಂಜೆ 5.30ಕ್ಕೆ ಇಲ್ಲಿನ
ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ನಡೆಯಲಿರುವ ಡಾ. ಪುಟ್ಟ
ರಾಜ ಗವಾಯಿ ಅವರ 109ನೇ ಜನ್ಮದಿನ ಕಾರ್ಯಕ್ರಮದಲ್ಲಿ ಸಂಗೀತೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಜಮಖಂಡಿಯ ಮಾರುತಿ ನಾವಲಗಿ ಅವರ ಶಹನಾಯಿ ವಾದನ, ಪಂ. ವಿನಾಯಕ ತೊರವಿ ಅವರ ಗಾಯನ ಅಂದು ನಡೆಯಲಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಪಂ. ಎಂ.ವೆಂಕಟೇಶ ಕುಮಾರ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.