ಪರಮಶಿವಯ್ಯ ವೀರಶೈವ–ಲಿಂಗಾಯತ ನಿಗಮದ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ವೀರಶೈವ–ಲಿಂಗಾಯತ ಅಭಿವೃದ್ಧಿ ನಿಗಮದ ಮೊದಲ ಅಧ್ಯಕ್ಷರನ್ನಾಗಿ ಬಿ.ಎಸ್. ಪರಮಶಿವಯ್ಯ ಅವರನ್ನು ನೇಮಿಸಲಾಗಿದೆ.
ಸೋಮವಾರವಷ್ಟೇ ಈ ನಿಗಮ ರಚಿಸಿ ಆದೇಶ ಹೊರಡಿಸಿ, ₹500 ಕೋಟಿ ಅನುದಾನವನ್ನು ನಿಗದಿ ಮಾಡಲಾಗಿತ್ತು. ಅಷ್ಟೇಬೇಗನೆ ಅಧ್ಯಕ್ಷರ ನೇಮಕ ಮಾಡಲಾಗಿದೆ.
ಆರಂಭದಲ್ಲಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ನೇಮಕ ಮಾಡುವ ಬಗ್ಗೆ ಬಿ.ಎಸ್.ಯಡಿಯೂರಪ್ಪ ಅವರು ಒಲವು ಹೊಂದಿದ್ದರು. ಆದರೆ, ಅವರು ನಿರಾಕರಿಸಿದ್ದರಿಂದ ಈ ಹುದ್ದೆ ಪರಮಶಿವಯ್ಯ ಅವರಿಗೆ ಒಲಿದು ಬಂದಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.