‘ದೇವಸ್ಥಾನಗಳಿಗೆ ಹೋದರೆ ಸ್ವಲ್ಪ ನಿಂತುಕೊಳ್ಳಿ, ಅಲ್ಲಿಗೆ ಮಂಗಳಾರತಿ ತರುತ್ತೇವೆ ಎನ್ನುತ್ತಾರೆ. ದೇವಸ್ಥಾನದ ಒಳಕ್ಕೆ ಹೋಗುವ ಮೊದಲೇ ನನ್ನ ಹತ್ತಿರ ಮಂಗಳಾರತಿ ತರುತ್ತಾರೆ. ದೇವರ ಬಳಿ ಹೋಗಲು ಬಿಡುವುದಿಲ್ಲ. ದೇವಸ್ಥಾನದ ಒಳಗೆ ಬರುತ್ತಾರೆ ಎಂಬ ಆತಂಕದಿಂದ ಮಂಗಳಾರತಿಯನ್ನು ದೇವಸ್ಥಾನದಿಂದ ಹೊರಕ್ಕೆ ಹಿಡಿದುಕೊಂಡು ಓಡಿ ಬರುತ್ತಾರೆ. ಇಂತಹ ದಯನೀಯ ಸ್ಥಿತಿ ಈ ಸಮಾಜದಲ್ಲಿ ಇನ್ನೂ ಜೀವಂತ ಇದೆ’ ಎಂದು ವಿಷಾದಿಸಿದರು.