‘ಪರಿಷ್ಕೃತ ಪಠ್ಯ ಪುಸ್ತಕವನ್ನು ಮಕ್ಕಳಿಗೆ ವಿತರಿಸುವುದನ್ನು ತಕ್ಷಣ ನಿಲ್ಲಿಸಬೇಕು. ಈಗಾಗಲೇ ವಿತರಿಸಿರುವ ಪಠ್ಯಗಳನ್ನು ವಾಪಸು ಪಡೆದು ಶಾಲಾ ಮಕ್ಕಳ ಭವಿಷ್ಯವನ್ನು ಕಾಪಾಡಬೇಕು’ ಎಂದೂ ವೇದಿಕೆಯ ಕಾರ್ಯಕಾರಿ ಸಮಿತಿಯ ಬಿ.ಎನ್. ಯೋಗಾನಂದ, ಕೇಸರಿಹರವು, ಚಿದಾನಂದ, ಭಾಸ್ಕರ್ ರೆಡ್ಡಿ ಮತ್ತಿತರರು ಮುಖ್ಯಮಂತ್ರಿ ಬಳಿ ಆಗ್ರಹಿಸಿದ್ದಾರೆ.