<p><strong>ಹುಬ್ಬಳ್ಳಿ:</strong> ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲ್ಲ. ನನಗೆ ಜವಾಬ್ದಾರಿಯ ಅರಿವಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯತ್ನಾಳ ಅವರು ಆಗಾಗ ಇಂತಹ ಹೇಳಿಕೆ ನೀಡುತ್ತಿರುತ್ತಾರೆ. ಸೂಕ್ತ ಸಮಯದಲ್ಲಿ ಪಕ್ಷವು ಯತ್ನಾಳರ ಬಗೆಗೆ ನಿರ್ಧಾರ ತೆಗೆದುಕೊಳ್ಳಲಿದೆ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದರು.</p>.<p>‘ಕೋವಿಡ್–19 ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಹಾಗಾಗಿ, ಶಾಸಕರ ನಿರೀಕ್ಷೆಗೆ ತಕ್ಕಷ್ಟು ಅನುದಾನ ಬಿಡುಗಡೆ ಸಾಧ್ಯವಾಗಿಲ್ಲ. ಈ ನಡುವೆಯೂ ಆದ್ಯತೆ ಮೇರೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಪ್ರವಾಹ ಸಂತ್ರಸ್ಥರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯಲ್ಲಿ ಉಳಿದುಕೊಂಡು ನಿರ್ವಹಣೆ ಮಾಡುತ್ತಿದ್ದಾರೆ. ಕೇಂದ್ರದಿಂದಲೂ ಎನ್ಡಿಆರ್ಎಫ್ ನಿಯಮಗಳ ಪ್ರಕಾರ ಪರಿಹಾರ ಬಂದಿದೆ. ಪರಿಹಾರ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ’ ಎಂದರು.</p>.<p>‘ಮನೆ ಬಿದ್ದವರಿಗೆ ಮರು ನಿರ್ಮಾಣಕ್ಕಾಗಿ ₹5 ಲಕ್ಷ ಬಿಡುಗಡೆ ಮಾಡಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮನೆಗಳ ನಿರ್ಮಾಣದ ಪ್ರಗತಿಯ ವರದಿ ಬಂದಿಲ್ಲ. ಕೂಡಲೇ ವರದಿ ಸಲ್ಲಿಸುವಂತೆ ಸೂಚಿಸಲಾಗುವುದು. ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೂ ತರಲಾಗುವುದು ಎಂದು ಹೇಳಿದರು.</p>.<p>ಸುಧಾರಣಾ ಪರ್ವ: ಹೊಸ ಶಿಕ್ಷಣ ನೀತಿ, ಜಿಎಸ್ಟಿ, ಅಯೋದ್ಯೆ ರಾಮ ಮಂದಿರ ನಿರ್ಮಾಣ, ಒಂದು ದೇಶ ಒಂದು ಪಡಿತರ ಸೇರಿದಂತೆ ಹಲವು ಕ್ರಾಂತಿಕಾರ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಕೇಂದ್ರ ಸರ್ಕಾರ ಸುಧಾರಣಾ ಪರ್ವವನ್ನೇ ಅರಂಭಿಸಿದೆ ಎಂದು ಅವರು ತಿಳಿಸಿದರು.</p>.<p>ರಾಷ್ಟ್ರದ ಹಿತಕ್ಕಾಗಿ ನೀಡುತ್ತಿರುವ ಆಡಳಿತವನ್ನು ದೇಶದ ಜನತೆಯೂ ಚುನಾವಣೆಗಳಲ್ಲಿ ಬೆಂಬಲಿಸುತ್ತಾ ಬಂದಿದ್ದಾರೆ. ಪ್ರತಿಪಕ್ಷಗಳಿಗೆ ಟೀಕಿಸಲು ವಿಷಯಗಳೇ ಇಲ್ಲದಂತಾಗಿದೆ ಎಂದರು.</p>.<p>ಮುಂದಿನ ವರ್ಷ ತಮಿಳುನಾಡು, ಕೇರಳದಲ್ಲಿ ಚುನಾವಣೆ ನಡೆಯಲಿವೆ. ಸರ್ಕಾರ ರಚನೆಯಲ್ಲಿ ಬಿಜೆಪಿ ಮುಖ್ಯ ಪಾತ್ರವಹಿಸಲಾಗಿದೆ ಎಂದು ಹೇಳಿದರು.</p>.<p><strong>ಎಂಬಿಪಿ, ವಿನಯ್ ಸೇರ್ಪಡೆ ಚರ್ಚೆಯಾಗಿಲ್ಲ</strong></p>.<p>ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ, ಮಾಜಿ ಶಾಸಕ ವಿನಯ ಕುಲಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ ಎಂದು ಸಚಿವ ಸಿ.ಟಿ. ರವಿ ಹೇಳಿದರು.</p>.<p>ಇಂತಹ ವಿಷಯಗಳಲ್ಲಿ ನಿರ್ಧಾರವನ್ನು ಸ್ಥಳೀಯ ಘಟಕಗಳೊಂದಿಗೆ ಚರ್ಚಿಸಿಯೇ ತೆಗೆದುಕೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲ್ಲ. ನನಗೆ ಜವಾಬ್ದಾರಿಯ ಅರಿವಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯತ್ನಾಳ ಅವರು ಆಗಾಗ ಇಂತಹ ಹೇಳಿಕೆ ನೀಡುತ್ತಿರುತ್ತಾರೆ. ಸೂಕ್ತ ಸಮಯದಲ್ಲಿ ಪಕ್ಷವು ಯತ್ನಾಳರ ಬಗೆಗೆ ನಿರ್ಧಾರ ತೆಗೆದುಕೊಳ್ಳಲಿದೆ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದರು.</p>.<p>‘ಕೋವಿಡ್–19 ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಹಾಗಾಗಿ, ಶಾಸಕರ ನಿರೀಕ್ಷೆಗೆ ತಕ್ಕಷ್ಟು ಅನುದಾನ ಬಿಡುಗಡೆ ಸಾಧ್ಯವಾಗಿಲ್ಲ. ಈ ನಡುವೆಯೂ ಆದ್ಯತೆ ಮೇರೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಪ್ರವಾಹ ಸಂತ್ರಸ್ಥರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯಲ್ಲಿ ಉಳಿದುಕೊಂಡು ನಿರ್ವಹಣೆ ಮಾಡುತ್ತಿದ್ದಾರೆ. ಕೇಂದ್ರದಿಂದಲೂ ಎನ್ಡಿಆರ್ಎಫ್ ನಿಯಮಗಳ ಪ್ರಕಾರ ಪರಿಹಾರ ಬಂದಿದೆ. ಪರಿಹಾರ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ’ ಎಂದರು.</p>.<p>‘ಮನೆ ಬಿದ್ದವರಿಗೆ ಮರು ನಿರ್ಮಾಣಕ್ಕಾಗಿ ₹5 ಲಕ್ಷ ಬಿಡುಗಡೆ ಮಾಡಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮನೆಗಳ ನಿರ್ಮಾಣದ ಪ್ರಗತಿಯ ವರದಿ ಬಂದಿಲ್ಲ. ಕೂಡಲೇ ವರದಿ ಸಲ್ಲಿಸುವಂತೆ ಸೂಚಿಸಲಾಗುವುದು. ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೂ ತರಲಾಗುವುದು ಎಂದು ಹೇಳಿದರು.</p>.<p>ಸುಧಾರಣಾ ಪರ್ವ: ಹೊಸ ಶಿಕ್ಷಣ ನೀತಿ, ಜಿಎಸ್ಟಿ, ಅಯೋದ್ಯೆ ರಾಮ ಮಂದಿರ ನಿರ್ಮಾಣ, ಒಂದು ದೇಶ ಒಂದು ಪಡಿತರ ಸೇರಿದಂತೆ ಹಲವು ಕ್ರಾಂತಿಕಾರ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಕೇಂದ್ರ ಸರ್ಕಾರ ಸುಧಾರಣಾ ಪರ್ವವನ್ನೇ ಅರಂಭಿಸಿದೆ ಎಂದು ಅವರು ತಿಳಿಸಿದರು.</p>.<p>ರಾಷ್ಟ್ರದ ಹಿತಕ್ಕಾಗಿ ನೀಡುತ್ತಿರುವ ಆಡಳಿತವನ್ನು ದೇಶದ ಜನತೆಯೂ ಚುನಾವಣೆಗಳಲ್ಲಿ ಬೆಂಬಲಿಸುತ್ತಾ ಬಂದಿದ್ದಾರೆ. ಪ್ರತಿಪಕ್ಷಗಳಿಗೆ ಟೀಕಿಸಲು ವಿಷಯಗಳೇ ಇಲ್ಲದಂತಾಗಿದೆ ಎಂದರು.</p>.<p>ಮುಂದಿನ ವರ್ಷ ತಮಿಳುನಾಡು, ಕೇರಳದಲ್ಲಿ ಚುನಾವಣೆ ನಡೆಯಲಿವೆ. ಸರ್ಕಾರ ರಚನೆಯಲ್ಲಿ ಬಿಜೆಪಿ ಮುಖ್ಯ ಪಾತ್ರವಹಿಸಲಾಗಿದೆ ಎಂದು ಹೇಳಿದರು.</p>.<p><strong>ಎಂಬಿಪಿ, ವಿನಯ್ ಸೇರ್ಪಡೆ ಚರ್ಚೆಯಾಗಿಲ್ಲ</strong></p>.<p>ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ, ಮಾಜಿ ಶಾಸಕ ವಿನಯ ಕುಲಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ ಎಂದು ಸಚಿವ ಸಿ.ಟಿ. ರವಿ ಹೇಳಿದರು.</p>.<p>ಇಂತಹ ವಿಷಯಗಳಲ್ಲಿ ನಿರ್ಧಾರವನ್ನು ಸ್ಥಳೀಯ ಘಟಕಗಳೊಂದಿಗೆ ಚರ್ಚಿಸಿಯೇ ತೆಗೆದುಕೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>