<p><strong>ಬೆಂಗಳೂರು:</strong> ‘₹2 ಕೋಟಿ ಅನುದಾನದಲ್ಲಿ ಶಸ್ತ್ರಚಿಕಿತ್ಸೆ ಘಟಕ ಸೇರಿ ವಿವಿಧ ಆರೋಗ್ಯ ಸೇವೆ ಹೊಂದಿರುವ ಪಶು ಸಂಜೀವಿನಿ ವಾಹನ ಸೇವೆ ಜಾರಿಗೆ ತರಲಾಗುತ್ತಿದ್ದು, 15 ಜಿಲ್ಲೆಗಳಿಗೆ ಸೌಲಭ್ಯ ನೀಡಲಾಗುತ್ತದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಟ್ಟು 15 ಪಶು ಸಂಜೀವಿನಿ ವಾಹನಗಳಿಗೆ ವಿಧಾನಸೌಧದ ಆವರಣದಲ್ಲಿ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಈ ವಾಹನದಲ್ಲಿ ಶಸ್ತ್ರಚಿಕಿತ್ಸೆ ಘಟಕ ಸೇರಿ ವಿವಿಧ ಆರೋಗ್ಯ ಸೇವೆ ಲಭ್ಯವಿರುತ್ತವೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸಲಾಗುವುದು’ ಎಂದರು.</p>.<p>ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಮಾತನಾಡಿ, ‘ರಾಜ್ಯದಲ್ಲಿ ಗೋ ರಕ್ಷಣೆಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜಿಲ್ಲೆಗಳಿಗೆ ಈ ವಾಹನ ಸೌಲಭ್ಯ ವಿಸ್ತರಿಸಲು ಉದ್ದೇಶಿಸಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ ಗೋ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂಗಾರು ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ತರುವ ಯೋಚನೆಯಿದೆ’ ಎಂದರು.</p>.<p>‘ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ಗೆ ಬಿಟ್ಟ ವಿಚಾರ. ಸಂಪುಟದಿಂದ ನನ್ನ ಹೆಸರು ಕೈ ಬಿಡುವ ಸುದ್ದಿ ಸುಳ್ಳು’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘₹2 ಕೋಟಿ ಅನುದಾನದಲ್ಲಿ ಶಸ್ತ್ರಚಿಕಿತ್ಸೆ ಘಟಕ ಸೇರಿ ವಿವಿಧ ಆರೋಗ್ಯ ಸೇವೆ ಹೊಂದಿರುವ ಪಶು ಸಂಜೀವಿನಿ ವಾಹನ ಸೇವೆ ಜಾರಿಗೆ ತರಲಾಗುತ್ತಿದ್ದು, 15 ಜಿಲ್ಲೆಗಳಿಗೆ ಸೌಲಭ್ಯ ನೀಡಲಾಗುತ್ತದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಟ್ಟು 15 ಪಶು ಸಂಜೀವಿನಿ ವಾಹನಗಳಿಗೆ ವಿಧಾನಸೌಧದ ಆವರಣದಲ್ಲಿ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಈ ವಾಹನದಲ್ಲಿ ಶಸ್ತ್ರಚಿಕಿತ್ಸೆ ಘಟಕ ಸೇರಿ ವಿವಿಧ ಆರೋಗ್ಯ ಸೇವೆ ಲಭ್ಯವಿರುತ್ತವೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸಲಾಗುವುದು’ ಎಂದರು.</p>.<p>ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಮಾತನಾಡಿ, ‘ರಾಜ್ಯದಲ್ಲಿ ಗೋ ರಕ್ಷಣೆಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜಿಲ್ಲೆಗಳಿಗೆ ಈ ವಾಹನ ಸೌಲಭ್ಯ ವಿಸ್ತರಿಸಲು ಉದ್ದೇಶಿಸಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ ಗೋ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂಗಾರು ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ತರುವ ಯೋಚನೆಯಿದೆ’ ಎಂದರು.</p>.<p>‘ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ಗೆ ಬಿಟ್ಟ ವಿಚಾರ. ಸಂಪುಟದಿಂದ ನನ್ನ ಹೆಸರು ಕೈ ಬಿಡುವ ಸುದ್ದಿ ಸುಳ್ಳು’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>