ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನ(ಐಐಎಂಬಿ) ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್. ಚಂದ್ರಶೇಖರ್ ಈ ಅರ್ಜಿ ಸಲ್ಲಿಸಿದ್ದಾರೆ. ’ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ಕೋವಿಡ್ ಸೃಷ್ಟಿಸಿದೆ. ಈ ಸಂದರ್ಭದಲ್ಲಿ ಔಷಧ ಕಂಪನಿಗಳು ಪೇಟೆಂಟ್ ಕಾಯ್ದೆ 1970ರ ಸೆಕ್ಷನ್ 92ರ ಪ್ರಕಾರ ವಿನಾಯಿತಿ ಪಡೆಯಲು ಅವಕಾಶ ಇದೆ. ಇದನ್ನು ಪಡೆದುಕೊಳ್ಳುವಂತೆ ಔಷಧ ಕಂಪನಿಗಳನ್ನು ಸರ್ಕಾರ ಪ್ರೋತ್ಸಾಹಿಸಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ.