<p><strong>ಬೆಂಗಳೂರು: </strong>ವೈದ್ಯಕೀಯ ತುರ್ತು ಸಂದರ್ಭದಲ್ಲಿ ಸ್ವಯಂ ಪ್ರೇರಿತ ಪರವಾನಗಿ ಪಡೆದುಕೊಳ್ಳಲು ಪೇಟೆಂಟ್ ಕಾಯ್ದೆಯಲ್ಲಿರುವ ವಿನಾಯಿತಿ ಬಳಸಿಕೊಳ್ಳಲು ಔಷಧ ಕಂಪನಿಗಳನ್ನು ಪ್ರೋತ್ಸಾಹಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.</p>.<p>ಪೇಟೆಂಟ್ಗಳ ಪ್ರಧಾನ ನಿಯಂತ್ರಕರು, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ಎಸಿಎಂಆರ್) ಮತ್ತು ಭಾರತೀಯ ಪ್ರಧಾನ ಔಷಧ ನಿಯಂತ್ರಕರಿಗೂ ನೋಟಿಸ್ ನೀಡಲು ಆದೇಶಿಸಿದೆ.</p>.<p>ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನ(ಐಐಎಂಬಿ) ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್. ಚಂದ್ರಶೇಖರ್ ಈ ಅರ್ಜಿ ಸಲ್ಲಿಸಿದ್ದಾರೆ. ’ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ಕೋವಿಡ್ ಸೃಷ್ಟಿಸಿದೆ. ಈ ಸಂದರ್ಭದಲ್ಲಿ ಔಷಧ ಕಂಪನಿಗಳು ಪೇಟೆಂಟ್ ಕಾಯ್ದೆ 1970ರ ಸೆಕ್ಷನ್ 92ರ ಪ್ರಕಾರ ವಿನಾಯಿತಿ ಪಡೆಯಲು ಅವಕಾಶ ಇದೆ. ಇದನ್ನು ಪಡೆದುಕೊಳ್ಳುವಂತೆ ಔಷಧ ಕಂಪನಿಗಳನ್ನು ಸರ್ಕಾರ ಪ್ರೋತ್ಸಾಹಿಸಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ.</p>.<p>‘ಕೋವಿಡ್ ಲಸಿಕೆ ತಯಾರಿಕೆ ಮತ್ತು ವಿತರಣೆಯಲ್ಲಿನ ವೇಗವನ್ನು ಖಚಿತಪಡಿಸಿಕೊಳ್ಳಲು ಐಸಿಎಂಆರ್ಗೆ ನಿರ್ದೇಶನ ನೀಡಬೇಕು. 2021ರ ಆಗಸ್ಟ್ ವೇಳೆಗೆ ಇಡೀ ದೇಶದ ಜನರಿಗೆ ಲಸಿಕೆ ನೀಡಲು ಕಾರ್ಯತಂತ್ರ ರೂಪಿಸುವ ಅವಶ್ಯಕತೆ ಇದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೈದ್ಯಕೀಯ ತುರ್ತು ಸಂದರ್ಭದಲ್ಲಿ ಸ್ವಯಂ ಪ್ರೇರಿತ ಪರವಾನಗಿ ಪಡೆದುಕೊಳ್ಳಲು ಪೇಟೆಂಟ್ ಕಾಯ್ದೆಯಲ್ಲಿರುವ ವಿನಾಯಿತಿ ಬಳಸಿಕೊಳ್ಳಲು ಔಷಧ ಕಂಪನಿಗಳನ್ನು ಪ್ರೋತ್ಸಾಹಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.</p>.<p>ಪೇಟೆಂಟ್ಗಳ ಪ್ರಧಾನ ನಿಯಂತ್ರಕರು, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ಎಸಿಎಂಆರ್) ಮತ್ತು ಭಾರತೀಯ ಪ್ರಧಾನ ಔಷಧ ನಿಯಂತ್ರಕರಿಗೂ ನೋಟಿಸ್ ನೀಡಲು ಆದೇಶಿಸಿದೆ.</p>.<p>ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನ(ಐಐಎಂಬಿ) ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್. ಚಂದ್ರಶೇಖರ್ ಈ ಅರ್ಜಿ ಸಲ್ಲಿಸಿದ್ದಾರೆ. ’ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ಕೋವಿಡ್ ಸೃಷ್ಟಿಸಿದೆ. ಈ ಸಂದರ್ಭದಲ್ಲಿ ಔಷಧ ಕಂಪನಿಗಳು ಪೇಟೆಂಟ್ ಕಾಯ್ದೆ 1970ರ ಸೆಕ್ಷನ್ 92ರ ಪ್ರಕಾರ ವಿನಾಯಿತಿ ಪಡೆಯಲು ಅವಕಾಶ ಇದೆ. ಇದನ್ನು ಪಡೆದುಕೊಳ್ಳುವಂತೆ ಔಷಧ ಕಂಪನಿಗಳನ್ನು ಸರ್ಕಾರ ಪ್ರೋತ್ಸಾಹಿಸಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ.</p>.<p>‘ಕೋವಿಡ್ ಲಸಿಕೆ ತಯಾರಿಕೆ ಮತ್ತು ವಿತರಣೆಯಲ್ಲಿನ ವೇಗವನ್ನು ಖಚಿತಪಡಿಸಿಕೊಳ್ಳಲು ಐಸಿಎಂಆರ್ಗೆ ನಿರ್ದೇಶನ ನೀಡಬೇಕು. 2021ರ ಆಗಸ್ಟ್ ವೇಳೆಗೆ ಇಡೀ ದೇಶದ ಜನರಿಗೆ ಲಸಿಕೆ ನೀಡಲು ಕಾರ್ಯತಂತ್ರ ರೂಪಿಸುವ ಅವಶ್ಯಕತೆ ಇದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>