ಬೆಳಗಾವಿ: ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯದಲ್ಲಿದ್ದ ಜಿಲ್ಲೆಯ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಗೋಕಾಕ ತಾಲ್ಲೂಕಿನ ಕೊಣ್ಣೂರ ಗ್ರಾಮದ ಮಂಜುನಾಥ ಅಪ್ಪಣ್ಣ ಗೌಡಣ್ಣವರ (38) ಮೃತಪಟ್ಟವರು.
ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ನಲ್ಲಿ 18 ವರ್ಷಗಳಿಂದ ಚಾಲಕರಾಗಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಅವರುಗಸ್ತಿನಲ್ಲಿದ್ದ ವೇಳೆ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ಪಾರ್ಥಿವ ಶರೀರವನ್ನು ಜುಲೈ 12ರಂದು ಗೋವಾ ಮಾರ್ಗವಾಗಿ ಕೊಣ್ಣೂರಿಗೆ ತರಲಾಗುವುದು ಎಂದು ತಿಳಿದುಬಂದಿದೆ.