ಜುಲೈ 16ರಂದು ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ನಡೆಸುವ ಗ್ರಾಮ ವಾಸ್ತವ್ಯದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಪೌತಿ ಖಾತೆ ವರ್ಗಾವಣೆ ಆದೇಶ ಹೊರಡಿಸುವ ಅಧಿಕಾರವನ್ನುಉಪ ವಿಭಾಗಾಧಿಕಾರಿಗಳಿಗೆ ನೀಡಲಾಗುವುದು. ಮೃತರ ಹೆಸರಿನಲ್ಲಿರುವ ಪೌತಿ ಖಾತೆಗಳನ್ನು ವರ್ಗಾಯಿಸುವಾಗ ಅವರ ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳ ವಿವರವನ್ನು ಸ್ಥಳೀಯರಿಂದ ಖಚಿತಪಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.