ಈ ಸಂಬಂಧ ಅವರು ಪತ್ರ ಬರೆದಿದ್ದಾರೆ. ‘ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿರುವ ಕಾರಣ ಒಂದು ಸಾವಿರ ಹಾಸಿಗೆಯ ಆಸ್ಪತ್ರೆಯನ್ನು ಸೇನೆಯು ದೆಹಲಿಯಲ್ಲಿ ಪ್ರಾರಂಭಿಸಿದೆ. ಅದೇ ರೀತಿ, ತಮಿಳುನಾಡಿನಲ್ಲಿ ಕೂಡ ನಿರ್ಮಿಸಿದೆ. ಇದೇ ರೀತಿ ಕರ್ನಾಟಕದಲ್ಲಿ ಕೂಡ ಕೋವಿಡ್ ಚಿಕಿತ್ಸೆಗೆ ಕೇಂದ್ರ ನಿರ್ಮಿಸಬೇಕು. ಬೆಂಗಳೂರಿನಲ್ಲಿ ಕೂಡ ಕಮಾಂಡ್ ಆಸ್ಪತ್ರೆ ಸೇರಿದಂತೆ ಅನೇಕ ರಕ್ಷಣಾ ಸಂಸ್ಥೆಗಳಿವೆ. ಇಲ್ಲಿಯೂ ಕೋವಿಡ್ ಪೀಡಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.