‘ಏಪ್ರಿಲ್ 15ರ ಗಡುವಿನೊಳಗೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸದ ಕಾರಣಕ್ಕೆ ಪಿಡಿಒಗಳಿಗೆ ಸರ್ಕಾರ ಶೋಕಾಸ್ ನೋಟಿಸ್ ಹೊರಸಿತ್ತು. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಸ್ತರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಗಡುವನ್ನು ಮೂರು ತಿಂಗಳ ಅವಧಿಗೆ ವಿಸ್ತರಣೆ ಮಾಡುವುದೊಂದೇ ದಾರಿ’ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ತಿಳಿಸಿತು.