ಮನೋನಂದನ ಕೇಂದ್ರದ ಅಧ್ಯಕ್ಷ ಮಿಲಿಂದ್ ಎಸ್. ಗೋಖಲೆ ಮಾತನಾಡಿ, ‘ಹಲವು ದಾನಿಗಳು ಮತ್ತು ಹಲವು ಕಂಪನಿಗಳು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ನೀಡಿದ ದೇಣಿಗೆಯಿಂದ ವಿಶೇಷ ಮಕ್ಕಳ ಸೇವೆ ಕೈಗೊಳ್ಳಲು ಸಾಧ್ಯವಾಗಿದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ವಿಶೇಷ ಮಕ್ಕಳಿಗಾಗಿ ಶೀಘ್ರದಲ್ಲೇ ಮತ್ತೊಂದು ಹೊಸ ಕೇಂದ್ರವನ್ನು ಆರಂಭಿಸಲಾಗುವುದು. ಈ ಕೇಂದ್ರದಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಪ್ರಕಟಿಸಿದರು.