<p><strong>ಬೆಂಗಳೂರು</strong>: ‘ಅರ್ಚಕ ವೃತ್ತಿಯನ್ನು ಬ್ರಾಹ್ಮಣರಿಗೆ ಮಾತ್ರ ಸೀಮಿತಗೊಳಿಸಿ ಕಾನೂನು ರೂಪಿಸಬೇಕು ಎಂಬ ಯೋಚನೆಯೂ ನಮಗೆ ಬರಲು ಸಾಧ್ಯವಿಲ್ಲ’ ಎಂದು ಉಡುಪಿಯ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.</p>.<p>‘ಇಂತಹದ್ದೊಂದು ಕಾನೂನು ರೂಪಿಸಬೇಕು ಎಂದು ಸರ್ಕಾರಕ್ಕೆ ನಾನು ಆಗ್ರಹಿಸಿರುವುದಾಗಿ ವರದಿಯಾಗಿದೆ ಎಂದು ‘ಪ್ರಜಾವಾಣಿ’ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ. ಆ ರೀತಿಯ ವರದಿ ಪತ್ರಿಕೆಗಳಲ್ಲಿ ವರದಿಯಾಗಿದ್ದರೆಅದಕ್ಕೆ ನಾವು ಹೊಣೆಗಾರರಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p>‘ಹಿಂದೂ ಸಮಾಜದ ಅಖಂಡತೆಗಾಗಿ ಶ್ರಮಿಸುತ್ತಿರುವ ನಮ್ಮ ಮನೋಬಲವನ್ನು ಮುರಿಯುವ ಉದ್ದೇಶದಿಂದ, ಬ್ರಾಹ್ಮಣ ಮತ್ತು ಬ್ರಾಹ್ಮಣೇತರರೊಳಗೆ ಒಡಕು ಸೃಷ್ಟಿಸಲು, ಬ್ರಾಹ್ಮಣೇತರರನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿ ಛೂಬಿಡುವ ಪ್ರಯತ್ನ ಈ ವರದಿಗಳ ಮೂಲಕ ನಡೆದಿದೆ. ಇದರಿಂದ ನೊಂದಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅರ್ಚಕ ವೃತ್ತಿಯನ್ನು ಬ್ರಾಹ್ಮಣರಿಗೆ ಮಾತ್ರ ಸೀಮಿತಗೊಳಿಸಿ ಕಾನೂನು ರೂಪಿಸಬೇಕು ಎಂಬ ಯೋಚನೆಯೂ ನಮಗೆ ಬರಲು ಸಾಧ್ಯವಿಲ್ಲ’ ಎಂದು ಉಡುಪಿಯ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.</p>.<p>‘ಇಂತಹದ್ದೊಂದು ಕಾನೂನು ರೂಪಿಸಬೇಕು ಎಂದು ಸರ್ಕಾರಕ್ಕೆ ನಾನು ಆಗ್ರಹಿಸಿರುವುದಾಗಿ ವರದಿಯಾಗಿದೆ ಎಂದು ‘ಪ್ರಜಾವಾಣಿ’ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ. ಆ ರೀತಿಯ ವರದಿ ಪತ್ರಿಕೆಗಳಲ್ಲಿ ವರದಿಯಾಗಿದ್ದರೆಅದಕ್ಕೆ ನಾವು ಹೊಣೆಗಾರರಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p>‘ಹಿಂದೂ ಸಮಾಜದ ಅಖಂಡತೆಗಾಗಿ ಶ್ರಮಿಸುತ್ತಿರುವ ನಮ್ಮ ಮನೋಬಲವನ್ನು ಮುರಿಯುವ ಉದ್ದೇಶದಿಂದ, ಬ್ರಾಹ್ಮಣ ಮತ್ತು ಬ್ರಾಹ್ಮಣೇತರರೊಳಗೆ ಒಡಕು ಸೃಷ್ಟಿಸಲು, ಬ್ರಾಹ್ಮಣೇತರರನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿ ಛೂಬಿಡುವ ಪ್ರಯತ್ನ ಈ ವರದಿಗಳ ಮೂಲಕ ನಡೆದಿದೆ. ಇದರಿಂದ ನೊಂದಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>