ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ಸಾವಿರ ಸಾಹಿತಿ, ಕಲಾವಿದರಿಗೆ ಮಾಸಾಶನ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ

Last Updated 7 ಸೆಪ್ಟೆಂಬರ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು:ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ, ಕಷ್ಟದಲ್ಲಿರುವ 3 ಸಾವಿರ ಸಾಹಿತಿಗಳು–ಕಲಾವಿದರಿಗೆ ತಲಾ ₹ 2 ಸಾವಿರ ಮಾಸಾಶನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

2022ರ ಸೆಪ್ಟೆಂಬರ್ ತಿಂಗಳಿಂದಲೇ ಈ ಆದೇಶ ಅನ್ವಯವಾಗಲಿದೆ. ಮಾಸಾಶನಕ್ಕೆ ಸಾಹಿತಿಗಳು ಹಾಗೂ ಕಲಾವಿದರ ಆಯ್ಕೆಗೆ 2021ರಲ್ಲಿ ಶ್ರೀನಿವಾಸ ಮೈಸೂರು ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು.

ಆಯ್ಕೆ ಸಮಿತಿಯು 2018–19, 2019–20 ಹಾಗೂ 2020–21ನೇ ಸಾಲಿನಲ್ಲಿ ಮಾಸಾಶನಕ್ಕೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪರಿಶೀಲಿಸಿ, ಕಷ್ಟದಲ್ಲಿರುವ ಸಾಹಿತಿಗಳು ಹಾಗೂ ಕಲಾವಿದರನ್ನು ಆಯ್ಕೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT