ಬೆಂಗಳೂರು:ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ, ಕಷ್ಟದಲ್ಲಿರುವ 3 ಸಾವಿರ ಸಾಹಿತಿಗಳು–ಕಲಾವಿದರಿಗೆ ತಲಾ ₹ 2 ಸಾವಿರ ಮಾಸಾಶನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
2022ರ ಸೆಪ್ಟೆಂಬರ್ ತಿಂಗಳಿಂದಲೇ ಈ ಆದೇಶ ಅನ್ವಯವಾಗಲಿದೆ. ಮಾಸಾಶನಕ್ಕೆ ಸಾಹಿತಿಗಳು ಹಾಗೂ ಕಲಾವಿದರ ಆಯ್ಕೆಗೆ 2021ರಲ್ಲಿ ಶ್ರೀನಿವಾಸ ಮೈಸೂರು ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು.
ಆಯ್ಕೆ ಸಮಿತಿಯು 2018–19, 2019–20 ಹಾಗೂ 2020–21ನೇ ಸಾಲಿನಲ್ಲಿ ಮಾಸಾಶನಕ್ಕೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪರಿಶೀಲಿಸಿ, ಕಷ್ಟದಲ್ಲಿರುವ ಸಾಹಿತಿಗಳು ಹಾಗೂ ಕಲಾವಿದರನ್ನು ಆಯ್ಕೆ ಮಾಡಿದೆ.