ಈ ಕುರಿತು ಉಪ ಮೇಯರ್, ವಿರೋಧ ಪಕ್ಷದ ನಾಯಕ, ಸಭಾ ನಾಯಕ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರೊಂದಿಗೆ ಮೇಯರ್ ಈರೇಶ ಅಂಚಟಗೇರಿ ಸಂಜೆ ಎರಡು ತಾಸು ಸಭೆ ನಡೆಸಿ, ‘ಗಣೇಶೋತ್ಸವ ಸಂದರ್ಭದಲ್ಲಿ ರಚಿಸಿದ್ದ ಸದನ ಸಮಿತಿ, ಮೈದಾನವನ್ನು ಎಲ್ಲರಿಗೂ ಮುಕ್ತಗೊಳಿಸುವಂತೆ ಶಿಫಾರಸು ಮಾಡಿತ್ತು. ಅದರಂತೆ, ಮಹಾಪುರುಷರ ಜಯಂತಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಧಾರ್ಮಿಕ, ಸಾಮಾಜಿಕ ಹಾಗೂ ವಾಣಿಜ್ಯ ಚಟುವಟಿಕೆಗಳಿಗೂ ಮೈದಾನ ಮುಕ್ತವಾಗಿರಲಿದೆ. ಆಯುಕ್ತರು ಷರತ್ತುಬದ್ಧ ಅನುಮತಿ ನೀಡಲಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.