<p><strong>ಬಾಗಲಕೋಟೆ</strong>: ಕಡಲೆ ಬೆಳೆಗಾರರ ಸಂಕಷ್ಟಕ್ಕೆ ಕೊನೆಗೂ ಸ್ಪಂದಿಸಿರುವ ಕೇಂದ್ರ ಸರ್ಕಾರ ಅವರ ಬೇಡಿಕೆಯಂತೆ ಬೆಂಬಲ ಬೆಲೆಯಡಿ ಕಾಳು ಖರೀದಿಗೆ ಮುಂದಾಗಿದೆ. ಫೆಬ್ರುವರಿ 22ರಿಂದ ಖರೀದಿ ಆರಂಭಿಸುವಂತೆ ಆದೇಶ ಹೊರಡಿಸಿದೆ.</p>.<p>ಹಂಗಾಮು ಆರಂಭವಾಗಿ ಒಂದೂವರೆ ತಿಂಗಳು ಕಳೆದರೂ ಇನ್ನೂ ಕಡಲೆ ಖರೀದಿ ಆರಂಭವಾಗದ ಬಗ್ಗೆ ’ಪ್ರಜಾವಾಣಿ‘ ಫೆಬ್ರುವರಿ 13ರಂದು ವಿಶೇಷ ವರದಿ ಪ್ರಕಟಿಸಿತ್ತು. ಅದರ ಬೆನ್ನಿಗೆ ಸರ್ಕಾರದ ಆದೇಶ ಹೊರಬಿದ್ದಿದೆ.</p>.<p>ಕ್ವಿಂಟಲ್ಗೆ ₹ 5100ರಂತೆ ಬೆಂಬಲ ಬೆಲೆಯಲ್ಲಿ ಎಕರೆಗೆ ನಾಲ್ಕು ಕ್ವಿಂಟಲ್ನಂತೆ ಪ್ರತಿ ರೈತರಿಂದ ಕನಿಷ್ಠ 15 ಕ್ವಿಂಟಲ್ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.</p>.<p>ಫೆಬ್ರುವರಿ 15ರಿಂದ ಏಪ್ರಿಲ್ 30ರವರೆಗೆ ರೈತರಿಗೆ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಮೇ 14ರವರೆಗೆ ಖರೀದಿಗೆ ಅನುಮತಿ ನೀಡಲಾಗಿದೆ.</p>.<p>ಜಿಲ್ಲೆಯಲ್ಲಿ ಎಷ್ಟು ಕಡೆ ಖರೀದಿ ಕೇಂದ್ರ ತೆರೆಯಬೇಕು ಎಂಬುದರ ಬಗ್ಗೆ ಖರೀದಿ ಸಂಸ್ಥೆಯಾದ ರಾಜ್ಯ ಕೃಷಿ ಸಹಕಾರ ಮಾರಾಟ ಮಹಾಮಂಡಳದ ಜಿಲ್ಲಾ ವ್ಯವಸ್ಥಾಪಕರಿಗೆ ಮಾಹಿತಿ ಕೇಳಿದ್ದೇವೆ. ನಂತರ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಖರೀದಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಲಾಗುವುದು ಎಂದು ಎಪಿಎಂಸಿ ಸಹಾಯಕ ನಿರ್ದೇಶಕ ಎನ್.ಎ.ಲಕ್ಕುಂಡಿ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಕಡಲೆ ಬೆಳೆಗಾರರ ಸಂಕಷ್ಟಕ್ಕೆ ಕೊನೆಗೂ ಸ್ಪಂದಿಸಿರುವ ಕೇಂದ್ರ ಸರ್ಕಾರ ಅವರ ಬೇಡಿಕೆಯಂತೆ ಬೆಂಬಲ ಬೆಲೆಯಡಿ ಕಾಳು ಖರೀದಿಗೆ ಮುಂದಾಗಿದೆ. ಫೆಬ್ರುವರಿ 22ರಿಂದ ಖರೀದಿ ಆರಂಭಿಸುವಂತೆ ಆದೇಶ ಹೊರಡಿಸಿದೆ.</p>.<p>ಹಂಗಾಮು ಆರಂಭವಾಗಿ ಒಂದೂವರೆ ತಿಂಗಳು ಕಳೆದರೂ ಇನ್ನೂ ಕಡಲೆ ಖರೀದಿ ಆರಂಭವಾಗದ ಬಗ್ಗೆ ’ಪ್ರಜಾವಾಣಿ‘ ಫೆಬ್ರುವರಿ 13ರಂದು ವಿಶೇಷ ವರದಿ ಪ್ರಕಟಿಸಿತ್ತು. ಅದರ ಬೆನ್ನಿಗೆ ಸರ್ಕಾರದ ಆದೇಶ ಹೊರಬಿದ್ದಿದೆ.</p>.<p>ಕ್ವಿಂಟಲ್ಗೆ ₹ 5100ರಂತೆ ಬೆಂಬಲ ಬೆಲೆಯಲ್ಲಿ ಎಕರೆಗೆ ನಾಲ್ಕು ಕ್ವಿಂಟಲ್ನಂತೆ ಪ್ರತಿ ರೈತರಿಂದ ಕನಿಷ್ಠ 15 ಕ್ವಿಂಟಲ್ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.</p>.<p>ಫೆಬ್ರುವರಿ 15ರಿಂದ ಏಪ್ರಿಲ್ 30ರವರೆಗೆ ರೈತರಿಗೆ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಮೇ 14ರವರೆಗೆ ಖರೀದಿಗೆ ಅನುಮತಿ ನೀಡಲಾಗಿದೆ.</p>.<p>ಜಿಲ್ಲೆಯಲ್ಲಿ ಎಷ್ಟು ಕಡೆ ಖರೀದಿ ಕೇಂದ್ರ ತೆರೆಯಬೇಕು ಎಂಬುದರ ಬಗ್ಗೆ ಖರೀದಿ ಸಂಸ್ಥೆಯಾದ ರಾಜ್ಯ ಕೃಷಿ ಸಹಕಾರ ಮಾರಾಟ ಮಹಾಮಂಡಳದ ಜಿಲ್ಲಾ ವ್ಯವಸ್ಥಾಪಕರಿಗೆ ಮಾಹಿತಿ ಕೇಳಿದ್ದೇವೆ. ನಂತರ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಖರೀದಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಲಾಗುವುದು ಎಂದು ಎಪಿಎಂಸಿ ಸಹಾಯಕ ನಿರ್ದೇಶಕ ಎನ್.ಎ.ಲಕ್ಕುಂಡಿ ‘ಪ್ರಜಾವಾಣಿ‘ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>