<p><strong>ಬೆಂಗಳೂರು:</strong> ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ದೈನಂದಿನ ಸೇವೆಗಳನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.</p>.<p>ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆ, ‘ಆಯಾ ದೇವಾಲಯಗಳ ಸಂಪ್ರದಾಯಗಳಿಗೆ ಅನುಗುಣವಾಗಿ ಈ ಹಿಂದೆ ನಡೆಸುತ್ತಿದ್ದ ಸೇವಗಳನ್ನು ಭಕ್ತರ ಸಂಖ್ಯೆ ಹಾಗೂ ಸ್ಥಳಾವಕಾಶದ ಲಭ್ಯತೆ ಆಧಾರದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ಅನುವಂಶಿಕ ಮೊಕ್ತೇಸರರು ನಿಗದಿಪಡಿಸಬೇಕು. ಕೊರೊನಾ ಸೋಂಕು ಹರಡದಂತೆ ಮಾರ್ಗಸೂಚಿಗಳನ್ನು ಪಾಲಿಸಿ, ಭಕ್ತರಿಗೆ ಅವಕಾಶ ಕಲ್ಪಿಸಬೇಕು’ ಎಂದು ತಿಳಿಸಲಾಗಿದೆ.</p>.<p>‘ಜಾತ್ರಾ ಮಹೋತ್ಸವ, ಬ್ರಹ್ಮರಥೋತ್ಸವ ಮುಂತಾದ ವಿಶೇಷ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ಉತ್ಸವಗಳನ್ನು ನಿಲ್ಲಿಸುವ ಸಂಪ್ರದಾಯ ಇಲ್ಲದ ದೇವಸ್ಥಾನಗಳಲ್ಲಿ ಸಾಂಕೇತಿಕವಾಗಿ, ಭಕ್ತಸಂದಣಿ ಇಲ್ಲದಂತೆ ನಡೆಸಬಹುದು. ಆದರೆ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಇಲಾಖೆಯ ಆಯುಕ್ತರಿಗೆ, ಸಹಾಯಕ ಆಯುಕ್ತರು ವರದಿ ನೀಡಬೇಕು’ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ದೈನಂದಿನ ಸೇವೆಗಳನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.</p>.<p>ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆ, ‘ಆಯಾ ದೇವಾಲಯಗಳ ಸಂಪ್ರದಾಯಗಳಿಗೆ ಅನುಗುಣವಾಗಿ ಈ ಹಿಂದೆ ನಡೆಸುತ್ತಿದ್ದ ಸೇವಗಳನ್ನು ಭಕ್ತರ ಸಂಖ್ಯೆ ಹಾಗೂ ಸ್ಥಳಾವಕಾಶದ ಲಭ್ಯತೆ ಆಧಾರದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ಅನುವಂಶಿಕ ಮೊಕ್ತೇಸರರು ನಿಗದಿಪಡಿಸಬೇಕು. ಕೊರೊನಾ ಸೋಂಕು ಹರಡದಂತೆ ಮಾರ್ಗಸೂಚಿಗಳನ್ನು ಪಾಲಿಸಿ, ಭಕ್ತರಿಗೆ ಅವಕಾಶ ಕಲ್ಪಿಸಬೇಕು’ ಎಂದು ತಿಳಿಸಲಾಗಿದೆ.</p>.<p>‘ಜಾತ್ರಾ ಮಹೋತ್ಸವ, ಬ್ರಹ್ಮರಥೋತ್ಸವ ಮುಂತಾದ ವಿಶೇಷ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ಉತ್ಸವಗಳನ್ನು ನಿಲ್ಲಿಸುವ ಸಂಪ್ರದಾಯ ಇಲ್ಲದ ದೇವಸ್ಥಾನಗಳಲ್ಲಿ ಸಾಂಕೇತಿಕವಾಗಿ, ಭಕ್ತಸಂದಣಿ ಇಲ್ಲದಂತೆ ನಡೆಸಬಹುದು. ಆದರೆ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಇಲಾಖೆಯ ಆಯುಕ್ತರಿಗೆ, ಸಹಾಯಕ ಆಯುಕ್ತರು ವರದಿ ನೀಡಬೇಕು’ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>