<p><strong>ಬೆಂಗಳೂರು:</strong> ಪಿಇಎಸ್ ವಿಶ್ವವಿದ್ಯಾಲಯ ಬಿ.ಟೆಕ್ ಕೋರ್ಸ್ಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ನಡೆಸಿದ ಪ್ರವೇಶ ಪರೀಕ್ಷೆಯ (ಪೆಸೆಟ್– 2020) ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ನ್ಯಾಷನಲ್ ಪಬ್ಲಿಕ್ ಶಾಲೆಯ ಕಾವ್ಯಾ ಭಟ್ ಪ್ರಥಮ ರ್ಯಾಂಕ್ ಪಡೆದಿದ್ದಾರೆ.</p>.<p>ಸಿಇಟಿ ಮತ್ತು ಕಾಮೆಡ್-ಕೆನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದ ಎಂ. ರಕ್ಷಿತ್, ಈ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಶ್ರೀಕುಮಾರನ್ಸ್ ಚಿಲ್ಡ್ರನ್ ಹೋಂನ ಸಿಂಚನಾ ಕುಂಬ್ಳೆತೃತೀಯ ಸ್ಥಾನ ಗಳಿಸಿದ್ದಾರೆ. ಆಗಸ್ಟ್ತಿಂಗಳಲ್ಲಿ 31 ನಗರಗಳಲ್ಲಿ ನಡೆದ ಪರೀಕ್ಷೆಯಲ್ಲಿ 16,800 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎಂ.ಆರ್. ದೊರೆಸ್ವಾಮಿ ತಿಳಿಸಿದರು.</p>.<p>ಸೋಮವಾರ ಫಲಿತಾಂಶ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಮೊದಲ ಮೂರು ರ್ಯಾಂಕ್ ಬಂದಿರುವ ವಿದ್ಯಾರ್ಥಿಗಳಿಗೆ ನಮ್ಮ ಕಾಲೇಜಿನಲ್ಲಿ ಉಚಿತವಾಗಿ ಸೀಟು ನೀಡುತ್ತೇವೆ. ರ್ಯಾಂಕ್ ವಿದ್ಯಾರ್ಥಿಗಳಿಗೆ ಇದೇ 18ರಿಂದ 20ರವರೆಗೆ ಆಫ್ಲೈನ್ನಲ್ಲೇ ಕೌನ್ಸೆಲಿಂಗ್ ನಡೆಸಲಾಗುತ್ತದೆ’ ಎಂದರು.</p>.<p>‘1,523 ವಿದ್ಯಾರ್ಥಿಗಳು ಪ್ಲೇಸ್ ಮೆಂಟ್ಗೆ ಅರ್ಹತೆ ಪಡೆದಿದ್ದರು. 22 ಕಂಪನಿಗಳು ಅನ್ಲೈನ್ನಲ್ಲಿ ಸಂದ ರ್ಶನ ನಡೆಸಿದ ಉದ್ಯೋಗ ನೀಡಿವೆ. ವಾರ್ಷಿಕ ₹ 39.92 ಲಕ್ಷ ಪ್ಯಾಕೇಜ್ಗೆ ಮೂರು ವಿದ್ಯಾರ್ಥಿಗಳು ಈ ಬಾರಿ ಆಯ್ಕೆ ಆಗಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಿಇಎಸ್ ವಿಶ್ವವಿದ್ಯಾಲಯ ಬಿ.ಟೆಕ್ ಕೋರ್ಸ್ಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ನಡೆಸಿದ ಪ್ರವೇಶ ಪರೀಕ್ಷೆಯ (ಪೆಸೆಟ್– 2020) ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ನ್ಯಾಷನಲ್ ಪಬ್ಲಿಕ್ ಶಾಲೆಯ ಕಾವ್ಯಾ ಭಟ್ ಪ್ರಥಮ ರ್ಯಾಂಕ್ ಪಡೆದಿದ್ದಾರೆ.</p>.<p>ಸಿಇಟಿ ಮತ್ತು ಕಾಮೆಡ್-ಕೆನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದ ಎಂ. ರಕ್ಷಿತ್, ಈ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಶ್ರೀಕುಮಾರನ್ಸ್ ಚಿಲ್ಡ್ರನ್ ಹೋಂನ ಸಿಂಚನಾ ಕುಂಬ್ಳೆತೃತೀಯ ಸ್ಥಾನ ಗಳಿಸಿದ್ದಾರೆ. ಆಗಸ್ಟ್ತಿಂಗಳಲ್ಲಿ 31 ನಗರಗಳಲ್ಲಿ ನಡೆದ ಪರೀಕ್ಷೆಯಲ್ಲಿ 16,800 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎಂ.ಆರ್. ದೊರೆಸ್ವಾಮಿ ತಿಳಿಸಿದರು.</p>.<p>ಸೋಮವಾರ ಫಲಿತಾಂಶ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಮೊದಲ ಮೂರು ರ್ಯಾಂಕ್ ಬಂದಿರುವ ವಿದ್ಯಾರ್ಥಿಗಳಿಗೆ ನಮ್ಮ ಕಾಲೇಜಿನಲ್ಲಿ ಉಚಿತವಾಗಿ ಸೀಟು ನೀಡುತ್ತೇವೆ. ರ್ಯಾಂಕ್ ವಿದ್ಯಾರ್ಥಿಗಳಿಗೆ ಇದೇ 18ರಿಂದ 20ರವರೆಗೆ ಆಫ್ಲೈನ್ನಲ್ಲೇ ಕೌನ್ಸೆಲಿಂಗ್ ನಡೆಸಲಾಗುತ್ತದೆ’ ಎಂದರು.</p>.<p>‘1,523 ವಿದ್ಯಾರ್ಥಿಗಳು ಪ್ಲೇಸ್ ಮೆಂಟ್ಗೆ ಅರ್ಹತೆ ಪಡೆದಿದ್ದರು. 22 ಕಂಪನಿಗಳು ಅನ್ಲೈನ್ನಲ್ಲಿ ಸಂದ ರ್ಶನ ನಡೆಸಿದ ಉದ್ಯೋಗ ನೀಡಿವೆ. ವಾರ್ಷಿಕ ₹ 39.92 ಲಕ್ಷ ಪ್ಯಾಕೇಜ್ಗೆ ಮೂರು ವಿದ್ಯಾರ್ಥಿಗಳು ಈ ಬಾರಿ ಆಯ್ಕೆ ಆಗಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>