‘ಸಿದ್ದರಾಮಯ್ಯ ಪಿಎಫ್ಐ ಭಾಗ್ಯ’ ಹೆಸರಿನಲ್ಲಿ ಭಿತ್ತಿಪತ್ರವನ್ನು ಸೋಮವಾರ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಹಿಂದೆ ತನ್ವೀರ್ ಸೇಠ್ ಪತ್ರ ಬರೆದು ಪಿಎಫ್ಐ ಕಾರ್ಯಕರ್ತರು ಅಮಾಯಕರು, ಅವರ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ. ಕೇಸ್ ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದ್ದರು. ಆದರೆ, ಯಾವುದೇ ಕಾರಣಕ್ಕೂ ಪ್ರಕರಣ ವಾಪಸ್ ಪಡೆಯಬಾರದೆಂದು ಅಂದಿನ ಡಿಜಿಪಿ,ಕಾನೂನು ಕಾರ್ಯದರ್ಶಿ ಸರ್ಕಾರಕ್ಕೆ ಸಲಹೆ ನೀಡಿದ್ದರು. ಆದರೂ, ಪಿಎಫ್ಐ ಏನು ತಪ್ಪುಮಾಡಿದೆ ರೀ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು’ ಎಂದು ಅಶೋಕ ಹೇಳಿದರು.