ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ವಿವಿಧ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಇನ್ಇಪಿ ಅನುಷ್ಠಾನ ಕುರಿತು ನಡೆದ ಚರ್ಚೆ ನಡೆಯಿತು. ಈ ಸಭೆಯಲ್ಲಿ ಶಿಕ್ಷಕರ ನಿರಂತರ ಗೈರು ಹಾಜರಿ, ಬಾಡಿಗೆ ಶಿಕ್ಷಕರ ನೆರವಿನ ವಿಷಯವೂ ಪ್ರಸ್ತಾಪವಾಗಿದೆ. ಶಾಲೆಗಳಿಗೆ ನೇಮಕವಾದ ಶಿಕ್ಷಕರನ್ನು ಸ್ಥಳೀಯ ಪೋಷಕರು ಗುರುತಿಸಲು, ಅವರ ನಿರಂತರ ಹಾಜರಾತಿ ಖಚಿತಪಡಿಸಿಕೊಳ್ಳಲು ಪ್ರತಿ ಶಿಕ್ಷಕರ ಭಾವಚಿತ್ರಗಳನ್ನು ಹಾಕಬೇಕೆಂಬ ನಿರ್ಧಾರಕ್ಕೆ ಬರಲಾಗಿದೆ.