ಶಂಕೆಯ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ. ಗೋವುಗಳ ಮಾರಾಟ, ಖರೀದಿ ಮತ್ತು ಮರು ಮಾರಾಟದ ಸಂಪೂರ್ಣ ನಿಷೇಧವು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಲಿದೆ. ಈ ಸುಗ್ರೀವಾಜ್ಞೆಯು ಆಹಾರದ ಆಯ್ಕೆಯ ಕಾರಣಕ್ಕಾಗಿ ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತ ವರ್ಗಗಳ ಜನರನ್ನು ಕ್ರಿಮಿನಲ್ ಅಪರಾಧಿಗಳನ್ನಾಗಿ ಪರಿವರ್ತಿಸುವ ಅಪಾಯವಿದೆ. ಗೋರಕ್ಷಣೆಯ ಹೆಸರಿನಲ್ಲಿ ಗುಂಪು ಹಲ್ಲೆ, ಹತ್ಯೆಗಳಿಗೂ ಎಡೆಮಾಡುವ ಸಾಧ್ಯತೆ ಇದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.