<p><strong>ಬೆಂಗಳೂರು: </strong>‘ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ‘ಜನಸೇವಕ ಯೋಜನೆ’ಯನ್ನು ಜ. 15ರಿಂದ ಬೆಂಗಳೂರಿನ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತೆ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲು ಚಿಂತಿಸಲಾಗಿದೆ’ ಎಂದು ಸಕಾಲ ಸಚಿವ ಸುರೇಶ್ ಕುಮಾರ್ ಹೇಳಿದರು.</p>.<p>ಬೆಂಗಳೂರು ನಗರ ವ್ಯಾಪ್ತಿಯ ಕ್ಷೇತ್ರಗಳ ಶಾಸಕರ ಸಭೆಯನ್ನು ಗುರುವಾರ ನಡೆಸಿ ಸಹಕಾರ ಕೋರಿದ ಅವರು, ಸರ್ಕಾರದ ಈ ಮಹತ್ವದ ಯೋಜನೆ ಅನುಷ್ಠಾನಗೊಳಿಸಲು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>‘ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೂ ‘ಜನಸೇವಕ’ ಯೋಜನೆ ವಿಸ್ತರಿಸಲಾಗುವುದು. ಖಾತಾ ವರ್ಗಾವಣೆ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದ ಸೇವೆಗಳು, ಆಧಾರ್ ಕಾರ್ಡಿನಲ್ಲಿನ ದೋಷಗಳ ತಿದ್ದುಪಡಿ, ಕಂದಾಯ, ಪೊಲೀಸ್, ಆಹಾರ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಒಟ್ಟು 55 ಸೇವೆಗಳನ್ನು ಈ ಯೋಜನೆಯಡಿ ಒದಗಿಸಲಾಗುವುದು’ ಎಂದರು.</p>.<p><strong>ಇ–ಸ್ಟ್ಯಾಂಪ್ ಸೇವೆ:</strong> ‘ಮುದ್ರಾಂಕ ಇಲಾಖೆಯ ಇ–ಸ್ಟಾಂಪ್ ಮತ್ತು ಸಾರಿಗೆ ಇಲಾಖೆಯ ಸೇವೆಗಳನ್ನು ಕೂಡಾ ಈ ಯೋಜನೆಯಡಿಯಲ್ಲಿ ಶೀಘ್ರವೇ ತರಲಾಗುವುದು’ ಎಂದು ಅವರು ಹೇಳಿದರು.</p>.<p>ಜನಸೇವಕ ಯೋಜನೆಯ ಬಗ್ಗೆ ವಾಟ್ಸ್ಆ್ಯಪ್, ಫೇಸ್ ಬುಕ್, ಟ್ವಿಟರ್ನಂಥ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುವುದು, ಕ್ಷೇತ್ರ ವ್ಯಾಪ್ತಿಯಲ್ಲಿ ಸ್ತ್ರೀಶಕ್ತಿ ಗುಂಪುಗಳು, ಸರ್ಕಾರೇತರ ಸಂಸ್ಥೆಗಳು, ವಿವಿಧ ಸಮುದಾಯ ಆಧಾರಿತ ಸಂಸ್ಥೆಗಳ ಜೊತೆ ಸಭೆ ನಡೆಸಿ ಪ್ರಚಾರಕ್ಕೆ ಅವಕಾಶ ಕಲ್ಪಿಸುವುದು ಸೇರಿದಂತೆ ಈ ಯೋಜನೆಯ ಅನುಷ್ಠಾನಕ್ಕೆ ಸಹಕರಿಸಬೇಕು’ ಎಂದು ಬೆಂಗಳೂರು ನಗರದ ಶಾಸಕರ ಬಳಿ ಸಚಿವರು ಮನವಿ ಮಾಡಿದರು.</p>.<p>ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಸತೀಶ್ ರೆಡ್ಡಿ, ಇ– ಆಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ‘ಜನಸೇವಕ ಯೋಜನೆ’ಯನ್ನು ಜ. 15ರಿಂದ ಬೆಂಗಳೂರಿನ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತೆ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲು ಚಿಂತಿಸಲಾಗಿದೆ’ ಎಂದು ಸಕಾಲ ಸಚಿವ ಸುರೇಶ್ ಕುಮಾರ್ ಹೇಳಿದರು.</p>.<p>ಬೆಂಗಳೂರು ನಗರ ವ್ಯಾಪ್ತಿಯ ಕ್ಷೇತ್ರಗಳ ಶಾಸಕರ ಸಭೆಯನ್ನು ಗುರುವಾರ ನಡೆಸಿ ಸಹಕಾರ ಕೋರಿದ ಅವರು, ಸರ್ಕಾರದ ಈ ಮಹತ್ವದ ಯೋಜನೆ ಅನುಷ್ಠಾನಗೊಳಿಸಲು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>‘ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೂ ‘ಜನಸೇವಕ’ ಯೋಜನೆ ವಿಸ್ತರಿಸಲಾಗುವುದು. ಖಾತಾ ವರ್ಗಾವಣೆ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದ ಸೇವೆಗಳು, ಆಧಾರ್ ಕಾರ್ಡಿನಲ್ಲಿನ ದೋಷಗಳ ತಿದ್ದುಪಡಿ, ಕಂದಾಯ, ಪೊಲೀಸ್, ಆಹಾರ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಒಟ್ಟು 55 ಸೇವೆಗಳನ್ನು ಈ ಯೋಜನೆಯಡಿ ಒದಗಿಸಲಾಗುವುದು’ ಎಂದರು.</p>.<p><strong>ಇ–ಸ್ಟ್ಯಾಂಪ್ ಸೇವೆ:</strong> ‘ಮುದ್ರಾಂಕ ಇಲಾಖೆಯ ಇ–ಸ್ಟಾಂಪ್ ಮತ್ತು ಸಾರಿಗೆ ಇಲಾಖೆಯ ಸೇವೆಗಳನ್ನು ಕೂಡಾ ಈ ಯೋಜನೆಯಡಿಯಲ್ಲಿ ಶೀಘ್ರವೇ ತರಲಾಗುವುದು’ ಎಂದು ಅವರು ಹೇಳಿದರು.</p>.<p>ಜನಸೇವಕ ಯೋಜನೆಯ ಬಗ್ಗೆ ವಾಟ್ಸ್ಆ್ಯಪ್, ಫೇಸ್ ಬುಕ್, ಟ್ವಿಟರ್ನಂಥ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುವುದು, ಕ್ಷೇತ್ರ ವ್ಯಾಪ್ತಿಯಲ್ಲಿ ಸ್ತ್ರೀಶಕ್ತಿ ಗುಂಪುಗಳು, ಸರ್ಕಾರೇತರ ಸಂಸ್ಥೆಗಳು, ವಿವಿಧ ಸಮುದಾಯ ಆಧಾರಿತ ಸಂಸ್ಥೆಗಳ ಜೊತೆ ಸಭೆ ನಡೆಸಿ ಪ್ರಚಾರಕ್ಕೆ ಅವಕಾಶ ಕಲ್ಪಿಸುವುದು ಸೇರಿದಂತೆ ಈ ಯೋಜನೆಯ ಅನುಷ್ಠಾನಕ್ಕೆ ಸಹಕರಿಸಬೇಕು’ ಎಂದು ಬೆಂಗಳೂರು ನಗರದ ಶಾಸಕರ ಬಳಿ ಸಚಿವರು ಮನವಿ ಮಾಡಿದರು.</p>.<p>ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಸತೀಶ್ ರೆಡ್ಡಿ, ಇ– ಆಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>