ಶನಿವಾರ, ಮಾರ್ಚ್ 25, 2023
28 °C

ಕೋವಿಡ್‌ನಿಂದ ಮೃತಪಟ್ಟ ರೈತರ ಕೃಷಿ ಸಾಲ ಮನ್ನಾ ಚಿಂತನೆ: ಎಸ್‌.ಟಿ.ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಬೆಂಗಳೂರು: ಈ ಸಾಲಿನಲ್ಲಿ ಕೋವಿಡ್‌ನಿಂದ ಮೃತ ಪಟ್ಟ ರೈತರ ಕೃಷಿ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಸಹಕಾರಿ ಸಾಲ ಪಡೆದಿರುವ ರೈತರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಎಷ್ಟು ಮೊತ್ತದವರೆಗಿನ ಸಾಲ ಮನ್ನಾ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಮೊದಲಿಗೆ ಎಷ್ಟು ಜನ ರೈತರು ಮೃತಪಟ್ಟಿದ್ದಾರೆ ಎಂಬುದನ್ನು ಒಂದು ವಾರದಲ್ಲಿ ಮಾಹಿತಿ ಪಡೆಯಲಾಗುವುದು. ಸಾಲ ಮನ್ನಾ ಮಾಡುವುದು ಶೇ 100 ರಷ್ಟು ಖಚಿತ ಎಂದು ಸಹಕಾರ ಸಚಿವ ಮತ್ತು ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾದ ಎಸ್‌.ಟಿ.ಸೋಮಶೇಖರ್‌ ಸುದ್ದಿಗಾರರಿಗೆ ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 4-5 ತಿಂಗಳ ಹಿಂದೆ ಖರೀದಿ ಮಾಡಲಾಗಿದ್ದ ರಾಗಿ, ಭತ್ತ ಹಾಗೂ ಗೋಧಿಗೆ ಬಾಕಿ ಹಣವು ಸುಮಾರು ₹721 ಕೋಟಿಯಷ್ಟಿದ್ದು, ಇದನ್ನು ಇನ್ನು 2-3 ದಿನಗಳಲ್ಲಿ ಪಾವತಿಸುವುದಾಗಿಯೂ ಎಸ್.ಟಿ. ಸೋಮಶೇಖರ್ ಅವರು ಹೇಳಿದರು.

ರೈತರಿಗೆ ₹721 ಕೋಟಿ ಬೆಂಬಲ ಬೆಲೆ ಬಿಡುಗಡೆ: ಎಸ್.ಟಿ. ಸೋಮಶೇಖರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು