‘ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳು ಮಾತೃಭಾಷೆ ಕನ್ನಡದೊಂದಿಗೆ ಇಂಗ್ಲಿಷ್ ಕಲಿಕೆಯನ್ನು ಅರಿಯಲು, ಬರೆಯಲು, ಮಾತನಾಡಲು ಮತ್ತು ನಿರರ್ಗಳವಾಗಿ ಅಭಿವ್ಯಕ್ತಿಸಿ ಸಂವಹನ ಮಾಡುವ ಸಾಮರ್ಥ್ಯ ಸಂಪಾದಿಸುವಲ್ಲಿ ರಾಜ್ಯದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರೊಂದಿಗೆ ಮೊದಲ ಸುತ್ತಿನ ಚಿಂತನಾ ಸಭೆ ನಡೆಸಲಾಗಿದೆ’ ಎಂದರು.