ಜಿಲ್ಲಾ ಪ್ರವಾಸ ಕೈಗೊಂಡ ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸೋಂಕಿನಿಂದಾಗಿ ಇಬ್ಬರು ಪಾಲಕರನ್ನು ಕಳೆದುಕೊಂಡ 52 ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆ ಘೋಷಿಸಲಾಗಿದೆ. ಪ್ರತಿ ಮಗುವಿನ ಪಾಲನೆಗೆ ಪ್ರತಿ ತಿಂಗಳು ₹3500 ನೀಡುವುದು, ಉಚಿತ ಶಿಕ್ಷಣ, ಎಸ್ಎಸ್ಎಲ್ಸಿ ಪಾಸಾದ ನಂತರ ಉನ್ನತ ಶಿಕ್ಷಣಕ್ಕೆ ಲ್ಯಾಪ್ಟಾಪ್ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ಅದರಂತೆಯೇ ಒಬ್ಬ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ಚರ್ಚೆಗಳು ನಡೆಯುತ್ತಿವೆ’ ಎಂದರು.