‘ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿತಗೊಳಿಸುವ ಬಗ್ಗೆ ಮುಖ್ಯಮಂತ್ರಿ ಅವರನ್ನು ಕೇಳಬೇಕು. ಕಾಳಸಂತೆಯಲ್ಲಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ಹೆಚ್ಚಿನ ಬೆಲೆಗೆ ವಿವಿಧ ಅಗತ್ಯ ವಸ್ತುಗಳನ್ನು ಮಾರಾಟ ಮಾಡಿದವರ ವಿರುದ್ಧ 75 ಮೊಕದ್ದಮೆಗಳನ್ನು ದಾಖಲಿಸಲಾಗಿದೆ. 29 ಮೊಕದ್ದಮೆಗಳಲ್ಲಿ ₹2.96 ಲಕ್ಷ ದಂಡ ವಸೂಲಿ ಮಾಡಲಾಗಿದೆ’ ಎಂದರು.