<p><strong>ಬೆಂಗಳೂರು: </strong>ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬಿಡುಗಡೆಯಾದ 10ನೇ ಕಂತಿನಲ್ಲಿ ರಾಜ್ಯದ ಒಟ್ಟು 34,26,401 ರೈತರಿಗೆ ₹ 685.28 ಕೋಟಿ ಬಿಡುಗಡೆಯಾಗಿದೆ.</p>.<p>ಆ ಮೂಲಕ, ಈ ಯೋಜನೆಯಡಿ ಈವರೆಗೆ (2019ರ ಫೆ.1ರಿಂದ 2021ರ ಜ. 1) ರಾಜ್ಯದ 54.52 ಲಕ್ಷ ರೈತ ಕುಟುಂಬಗಳಿಗೆ ಕಿಸಾನ್ ಸಮ್ಮಾನ್ ಯೋಜನೆಯ ನೆರವು ಸಿಕ್ಕಿದೆ.</p>.<p>ಈ ಯೋಜನೆಯಡಿ ಅನುದಾನವನ್ನು ₹ 2 ಸಾವಿರದಂತೆ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ವಾರ್ಷಿಕ ₹ 6 ಸಾವಿರ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ನೀಡಲಾಗುತ್ತಿದೆ.</p>.<p>ಕೇಂದ್ರ ಸರ್ಕಾರ ತಲಾ ರೈತರಿಗೆ ₹6 ಸಾವಿರ ನೀಡುತ್ತಿದೆ. ಇದಕ್ಕೆ ₹4 ಸಾವಿರ ಸೇರಿಸುತ್ತಿರುವ ಕರ್ನಾಟಕ ಸರ್ಕಾರ ಒಟ್ಟು ₹10 ಸಾವಿರ ಸಿಗುವಂತೆ ಮಾಡಿದೆ. ಈ ಆರ್ಥಿಕ ವರ್ಷದ ಎರಡನೇ ಕಂತಿನ ನೆರವಿಗಾಗಿ ರಾಜ್ಯ ಸರ್ಕಾರ ₹1007.18 ಕೋಟಿ ರೂ. ಬಿಡುಗಡೆ ಮಾಡಿದ್ದು, ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಈ ಯೋಜನೆಯಡಿ ಕೇಂದ್ರ ಸರ್ಕಾರವು ಒಟ್ಟು ₹ 8,022.69 ಕೋಟಿ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು ₹2,850.54 ಕೋಟಿ ಬಿಡುಗಡೆ ಮಾಡಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬಿಡುಗಡೆಯಾದ 10ನೇ ಕಂತಿನಲ್ಲಿ ರಾಜ್ಯದ ಒಟ್ಟು 34,26,401 ರೈತರಿಗೆ ₹ 685.28 ಕೋಟಿ ಬಿಡುಗಡೆಯಾಗಿದೆ.</p>.<p>ಆ ಮೂಲಕ, ಈ ಯೋಜನೆಯಡಿ ಈವರೆಗೆ (2019ರ ಫೆ.1ರಿಂದ 2021ರ ಜ. 1) ರಾಜ್ಯದ 54.52 ಲಕ್ಷ ರೈತ ಕುಟುಂಬಗಳಿಗೆ ಕಿಸಾನ್ ಸಮ್ಮಾನ್ ಯೋಜನೆಯ ನೆರವು ಸಿಕ್ಕಿದೆ.</p>.<p>ಈ ಯೋಜನೆಯಡಿ ಅನುದಾನವನ್ನು ₹ 2 ಸಾವಿರದಂತೆ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ವಾರ್ಷಿಕ ₹ 6 ಸಾವಿರ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ನೀಡಲಾಗುತ್ತಿದೆ.</p>.<p>ಕೇಂದ್ರ ಸರ್ಕಾರ ತಲಾ ರೈತರಿಗೆ ₹6 ಸಾವಿರ ನೀಡುತ್ತಿದೆ. ಇದಕ್ಕೆ ₹4 ಸಾವಿರ ಸೇರಿಸುತ್ತಿರುವ ಕರ್ನಾಟಕ ಸರ್ಕಾರ ಒಟ್ಟು ₹10 ಸಾವಿರ ಸಿಗುವಂತೆ ಮಾಡಿದೆ. ಈ ಆರ್ಥಿಕ ವರ್ಷದ ಎರಡನೇ ಕಂತಿನ ನೆರವಿಗಾಗಿ ರಾಜ್ಯ ಸರ್ಕಾರ ₹1007.18 ಕೋಟಿ ರೂ. ಬಿಡುಗಡೆ ಮಾಡಿದ್ದು, ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಈ ಯೋಜನೆಯಡಿ ಕೇಂದ್ರ ಸರ್ಕಾರವು ಒಟ್ಟು ₹ 8,022.69 ಕೋಟಿ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು ₹2,850.54 ಕೋಟಿ ಬಿಡುಗಡೆ ಮಾಡಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>