‘ಉರಿಗೌಡ, ನಂಜೇಗೌಡ ಎನ್ನುವವರು ಟಿಪ್ಪುವನ್ನು ಕೊಂದರು ಎಂಬ ವಿಚಾರಕ್ಕೆ ಇತಿಹಾಸದಲ್ಲಿ ಸಾಕ್ಷಿಗಳಿಲ್ಲ. ಬಿಜೆಪಿ ಹೆಸರು ಹೇಳುವ ಮೂಲಕ ಕೀಳು ರಾಜಕೀಯ ಮಾಡುತ್ತಿದೆ. ಬಿಜೆಪಿ ನಾಯಕರು ಇದನ್ನು ಮುಂದುವರಿಸಿದರೆ, ಒಕ್ಕಲಿಗರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ’ ಎಂದು ಗುಡುಗಿದರು. ‘ಸಂಸದೆ ಸುಮಲತಾ ಅಂಬರೀಶ್ ಪ್ರಧಾನಿ ನರೇಂದ್ರ ಮೋದಿಗೆ ಬೆಲ್ಲ ಕೊಟ್ಟಿದ್ದಾರೆ. ಈ ಮೂಲಕವಾದರೂ ಮಂಡ್ಯ ಜಿಲ್ಲೆಗೆ ಒಳ್ಳೆಯ ಯೋಜನೆ ಬರಲಿ’ ಎಂದು ಆಶಿಸಿದರು.