ನವದೆಹಲಿ:ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನ್ಮದಿನದ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ, ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವಲ್ಲಿ ಸದಾನಂದಗೌಡ ಪ್ರಮುಖ ಪಾತ್ರವಹಿಸಿದ್ದಾರೆ ಎಂದೂ ಶ್ಲಾಘಿಸಿದ್ದಾರೆ.
ʼಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಅನುಭವಿ ನಾಯಕರಾಗಿರುವ ಅವರು ನಮ್ಮ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಶ್ರಮಿಸಿದ್ದಾರೆ. ರಾಸಾಯನಿಕ ಮತ್ತು ರಸಗೊಬ್ಬರ ಕ್ಷೇತ್ರದ ಅಭಿವೃದ್ಧಿಯನ್ನು ಖಚಿತಪಡಿಸುವ ಸಲುವಾಗಿ ಅವರು ಮುಂಚೂಣಿಯಲ್ಲಿ ನಿಂತಿದ್ದಾರೆ. ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆʼ ಎಂದು ಬರೆದುಕೊಂಡಿದ್ದಾರೆ.