‘ನಮ್ಮ ಪಕ್ಷ ಮತ್ತು ಕರ್ನಾಟಕದ ಬೆಳವಣಿಗೆಗೆ ಬಿ.ಎಸ್.ಯಡಿಯೂರಪ್ಪ ಅವರು ನೀಡಿರುವ ಅಭೂತಪೂರ್ವ ಕೊಡುಗೆಯನ್ನು ಪದಗಳಲ್ಲಿ ವರ್ಣಿಸಲಾಗದು. ದಶಕಗಳ ಕಾಲ ಅವರು ಕಷ್ಟಪಟ್ಟು ದುಡಿದು, ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರೊಂದಿಗೆ ಬೆರೆತಿದ್ದರು. ಸಾಮಾಜಿಕ ಕಲ್ಯಾಣ ವಿಚಾರದಲ್ಲಿ ತೋರ್ಪಡಿಸಿದ ಬದ್ಧತೆಗಾಗಿ ಅವರು ಮೆಚ್ಚುಗೆ ಪಡೆದಿದ್ದಾರೆ’ ಎಂದು ಮತ್ತೊಂದು ಟ್ವೀಟ್ನಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೊಂಡಾಡಿದ್ದಾರೆ.