<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ರೋಗಿಗಳಿಗೆ ನೀಡಲು ರೆಮ್ಡಿಸಿವಿರ್ ಚುಚ್ಚುಮದ್ದು ಮತ್ತು ಆಮ್ಲಜನಕ ಕೊರತೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯ ಗಮನ ಸೆಳೆದಿದ್ದಾರೆ.</p>.<p>ಕೋವಿಡ್ ಪ್ರಕರಣಗಳು ಅತೀ ಹೆಚ್ಚು ಕಂಡುಬರುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ದೂರವಾಣಿ ಮೂಲಕ ಸಮಾಲೋಚನೆ ನಡೆಸುತ್ತಿದ್ದು, ಭಾನುವಾರ ಬೆಳಿಗ್ಗೆ ಯಡಿಯೂರಪ್ಪ ಅವರಿಗೂ ಕರೆ ಮಾಡಿ ರಾಜ್ಯದಲ್ಲಿನ ವಸ್ತುಸ್ಥಿತಿಯ ಮಾಹಿತಿ ಪಡೆದಿದ್ದಾರೆ.</p>.<p>ಈ ವೇಳೆ, ಹೆಚ್ಚುತ್ತಿರುವ ಸೋಂಕು ಪ್ರಕರಣಗಳು ಮತ್ತು ಸಾವಿನ ಪ್ರಮಾಣದ ಸಹಿತ ರಾಜ್ಯದ ಸದ್ಯದ ಸ್ಥಿತಿಗತಿಯನ್ನು ಪ್ರಧಾನಿಗೆ ಯಡಿಯೂರಪ್ಪ ವಿವರಿಸಿದ್ದಾರೆ. ಅಲ್ಲದೆ, ರಾಜ್ಯಕ್ಕೆ ರೆಮ್ಡಿಸಿವಿರ್ ಮತ್ತು ಆಮ್ಲಜನಕ ಹಂಚಿಕೆ ಪಾಲು ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈವರೆಗೆ ತೆಗೆದುಕೊಂಡ ಕ್ರಮಗಳು ಮತ್ತು ಲಾಕ್ಡೌನ್ ವಿಧಿಸಿರುವ ಬಗ್ಗೆಯೂ ಪ್ರಧಾನಿ ಜೊತೆ ಯಡಿಯೂರಪ್ಪ ವಿಚಾರ ವಿನಿಮಯ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ರೋಗಿಗಳಿಗೆ ನೀಡಲು ರೆಮ್ಡಿಸಿವಿರ್ ಚುಚ್ಚುಮದ್ದು ಮತ್ತು ಆಮ್ಲಜನಕ ಕೊರತೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯ ಗಮನ ಸೆಳೆದಿದ್ದಾರೆ.</p>.<p>ಕೋವಿಡ್ ಪ್ರಕರಣಗಳು ಅತೀ ಹೆಚ್ಚು ಕಂಡುಬರುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ದೂರವಾಣಿ ಮೂಲಕ ಸಮಾಲೋಚನೆ ನಡೆಸುತ್ತಿದ್ದು, ಭಾನುವಾರ ಬೆಳಿಗ್ಗೆ ಯಡಿಯೂರಪ್ಪ ಅವರಿಗೂ ಕರೆ ಮಾಡಿ ರಾಜ್ಯದಲ್ಲಿನ ವಸ್ತುಸ್ಥಿತಿಯ ಮಾಹಿತಿ ಪಡೆದಿದ್ದಾರೆ.</p>.<p>ಈ ವೇಳೆ, ಹೆಚ್ಚುತ್ತಿರುವ ಸೋಂಕು ಪ್ರಕರಣಗಳು ಮತ್ತು ಸಾವಿನ ಪ್ರಮಾಣದ ಸಹಿತ ರಾಜ್ಯದ ಸದ್ಯದ ಸ್ಥಿತಿಗತಿಯನ್ನು ಪ್ರಧಾನಿಗೆ ಯಡಿಯೂರಪ್ಪ ವಿವರಿಸಿದ್ದಾರೆ. ಅಲ್ಲದೆ, ರಾಜ್ಯಕ್ಕೆ ರೆಮ್ಡಿಸಿವಿರ್ ಮತ್ತು ಆಮ್ಲಜನಕ ಹಂಚಿಕೆ ಪಾಲು ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈವರೆಗೆ ತೆಗೆದುಕೊಂಡ ಕ್ರಮಗಳು ಮತ್ತು ಲಾಕ್ಡೌನ್ ವಿಧಿಸಿರುವ ಬಗ್ಗೆಯೂ ಪ್ರಧಾನಿ ಜೊತೆ ಯಡಿಯೂರಪ್ಪ ವಿಚಾರ ವಿನಿಮಯ ನಡೆಸಿದ್ದಾರೆ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>