ಮುರುಘಾ ಮಠದಿಂದ ಹೊರನಡೆದು ಅಜ್ಞಾತ ಸ್ಥಳಕ್ಕೆ ತೆರಳಿದ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಹುಡುಕಾಟ ಆರಂಭಿಸಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಅವರನ್ನು ಹಾವೇರಿ ಪೊಲೀಸರು ಬಂಕಾಪುರದ ಬಳಿ ಪತ್ತೆ ಮಾಡಿದ್ದಾರೆ. ಹಾವೇರಿ ಪೊಲೀಸರು ಅವರೊಂದಿ ಚರ್ಚೆ ನಡೆಸಿ ಚಿತ್ರದುರ್ಗಕ್ಕೆ ಮರಳುವಂತೆ ಮನವೊಲಿಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಅವರನ್ನು ಕರೆತರಲಾಗುತ್ತದೆ.