ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅವರು, ಸಾವಿರಕ್ಕೂ ಹೆಚ್ಚು ಹನಿಗವನಗಳನ್ನು ಬರೆದು ಪ್ರಕಟಿಸಿದ್ದಾರೆ. " ಮಳೆ ", “ಆಲಿಕಲ್ಲು”, “ದೇವರ ನೆರಳು” ಮೊದಲಾದ ಕವನ ಸಂಕಲಗಳು ಅವರ ಸಾಹಿತ್ಯ ಕೃಷಿಯ ಮಜಲುಗಳು. ಇವರ ಹನಿಗವನಗಳ ಸಂಕಲನ ‘ಝರಿ’ ಉರ್ದು, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಗುಜರಾತಿ ಭಾಷೆಗಳಿಗೂ ಅನುವಾದಗೊಂಡಿವೆ.